ರಾಷ್ಟ್ರೀಯ

ಆಯೋಧ್ಯೆ ಅರ್ಚಕರಾಗಿ ಎಸ್‌ಸಿ-ಒಬಿಸಿ ಸಮುದಾಯದವರು ಆಯ್ಕೆ!

ಅಯೋಧ್ಯೆ : ಹಿಂದೂಗಳ ದಶಕಗಳ ಕನಸು ಈಡೇರುತ್ತಿದ್ದು, ಅಯೋಧ್ಯೆ ಶ್ರೀರಾಮಮಂದಿರ ಇದೇ ಜ.22 ರಂದು ಉದ್ಘಾಟನೆಯಾಗಲಿದೆ. ಇದೀಗ ರಾಮಮಂದಿರಕ್ಕೆ ಮಂದಿರಕ್ಕೆ‌ 24 ಅರ್ಚಕರನ್ನು ನೇಮಕ ಮಾಡಲಾಗಿದೆ.

ಅರ್ಚಕರಲ್ಲಿ ಇಬ್ಬರು ಎಸ್‌ಸಿ ಮತ್ತು ಒಬ್ಬರು ಒಬಿಸಿ ಸಮುದಾಯದವರಾಗಿದ್ದು ಮೂರು ತಿಂಗಳ ತರಬೇತಿ ನಂತರ ಈ ಅರ್ಚಕರು ನಿಯೋಜನೆಗೊಳ್ಳಲಿದ್ದಾರೆ.

ಜಾತಿ ಆಧಾರದಲ್ಲಿ ಅರ್ಚಕರನ್ನು ಆಯ್ಕೆ ಮಾಡದೇ, ಕೇವಲ ಅರ್ಹತೆಯ ಆಧಾರದ ಮೇಲೆ ಮಾತ್ರ ಅರ್ಚಕರನ್ನು ಆಯ್ಕೆ ಮಾಡಲಾಗಿದೆ. ರಾಮನಂದಿ ಸಂಪ್ರದಾಯದಂತೆ ಎಲ್ಲ ಅರ್ಚಕರಿಗೂ ಮೂರು ತಿಂಗಳ ತರಬೇತಿ ನೀಡಲಾಗುತ್ತಿದೆ.

ರಾಮಮಂದಿರದ ಮಹಂತ್ ಮಿಥಿಲೇಶ್ ನಂದಿನಿ ಶರಣ್ ಮತ್ತು ಮಹಂತ್ ಸತ್ಯನಾರಾಯಣ ದಾಸ್ ಅವರು ದೇವಾಲಯದ ವಿಗ್ರಹ ಪೂಜಿಸಲು ಪೌರೋಹಿತ್ಯ ಮತ್ತು ಆಚರಣೆಗಳ ತರಬೇತಿಯನ್ನು ನೀಡುತ್ತಿದ್ದಾರೆ.

ಮೂರು ಸುತ್ತಿನ ಸಂದರ್ಶನದ ಮೂಲಕ 3240 ಅಭ್ಯರ್ಥಿಗಳ ಪೈಕಿ 25 ಮಂದಿಯನ್ನು ತರಬೇತಿಗೆ ಆಯ್ಕೆ ಮಾಡಲಾಗಿದೆ. ಸಂದರ್ಶನದಲ್ಲಿ 14 ಪ್ರಶ್ನೆಗಳನ್ನು ಕೇಳಲಾಗಿತ್ತು.

ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ 25 ಯುವಕರನ್ನು ಅರ್ಚಕರ‌ ಹುದ್ದೆಗೆ ನವೆಂಬರ್‌ನಲ್ಲಿ ಆಯ್ಕೆ ಮಾಡಲಾಗಿದೆ. ಇವರಲ್ಲಿ ಆಚಾರ್ಯ ದೈವಜ್ಞ ಕೃಷ್ಣ ಶಾಸ್ತ್ರಿ ಅವರು ಹಿಂದೆ‌ ಸರಿದಿದ್ದಾರೆ.

ರಾಮಲಲ್ಲಾ‌ನ ಪೂಜೆಗೆ ಆಯ್ಕೆಯಾಗಿರುವ ಅರ್ಚಕರು ಮೊಬೈಲ್ ಫೋನ್ ಬಳಸುವಂತಿಲ್ಲ ಅಥವಾ ಯಾವುದೇ ಹೊರಗಿನವರೊಂದಿಗೆ ಸಂಪರ್ಕ ಹೊಂದುವಂತಿಲ್ಲ.

ಅಂದಹಾಗೆ ಮಂದಿರಕ್ಕೆ ಬ್ರಾಹ್ಮಣೇತರರು ಅರ್ಚಕರಾಗಿರುವುದು ಇದೆ ಮೊದಲನೇಲ್ಲ, ದಕ್ಷಿಣ ಭಾರತದ ಬಹುತೇಕ ದೇವಾಲಯಗಳಲ್ಲಿ ಶೇ.70 ಪ್ರತಿಶತದಷ್ಟು ಅರ್ಚಕರು ಬ್ರಾಹ್ಮಣೇತರರು ಎಂಬುದು ಗಮನಾರ್ಹ.

ವಿಶೇಷವೆಂದರೆ ಶೈವ ಸಂಪ್ರದಾಯದ ದೇವಾಲಯಗಳಲ್ಲಿ ಬಹುತೇಕ ಬ್ರಾಹ್ಮಣೇತರ ಅರ್ಚಕರದ್ದೇ ಪ್ರಾಬಲ್ಯವಿರುತ್ತದೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago