ರಾಷ್ಟ್ರೀಯ

ಆಯೋಧ್ಯೆ ಅರ್ಚಕರಾಗಿ ಎಸ್‌ಸಿ-ಒಬಿಸಿ ಸಮುದಾಯದವರು ಆಯ್ಕೆ!

ಅಯೋಧ್ಯೆ : ಹಿಂದೂಗಳ ದಶಕಗಳ ಕನಸು ಈಡೇರುತ್ತಿದ್ದು, ಅಯೋಧ್ಯೆ ಶ್ರೀರಾಮಮಂದಿರ ಇದೇ ಜ.22 ರಂದು ಉದ್ಘಾಟನೆಯಾಗಲಿದೆ. ಇದೀಗ ರಾಮಮಂದಿರಕ್ಕೆ ಮಂದಿರಕ್ಕೆ‌ 24 ಅರ್ಚಕರನ್ನು ನೇಮಕ ಮಾಡಲಾಗಿದೆ.

ಅರ್ಚಕರಲ್ಲಿ ಇಬ್ಬರು ಎಸ್‌ಸಿ ಮತ್ತು ಒಬ್ಬರು ಒಬಿಸಿ ಸಮುದಾಯದವರಾಗಿದ್ದು ಮೂರು ತಿಂಗಳ ತರಬೇತಿ ನಂತರ ಈ ಅರ್ಚಕರು ನಿಯೋಜನೆಗೊಳ್ಳಲಿದ್ದಾರೆ.

ಜಾತಿ ಆಧಾರದಲ್ಲಿ ಅರ್ಚಕರನ್ನು ಆಯ್ಕೆ ಮಾಡದೇ, ಕೇವಲ ಅರ್ಹತೆಯ ಆಧಾರದ ಮೇಲೆ ಮಾತ್ರ ಅರ್ಚಕರನ್ನು ಆಯ್ಕೆ ಮಾಡಲಾಗಿದೆ. ರಾಮನಂದಿ ಸಂಪ್ರದಾಯದಂತೆ ಎಲ್ಲ ಅರ್ಚಕರಿಗೂ ಮೂರು ತಿಂಗಳ ತರಬೇತಿ ನೀಡಲಾಗುತ್ತಿದೆ.

ರಾಮಮಂದಿರದ ಮಹಂತ್ ಮಿಥಿಲೇಶ್ ನಂದಿನಿ ಶರಣ್ ಮತ್ತು ಮಹಂತ್ ಸತ್ಯನಾರಾಯಣ ದಾಸ್ ಅವರು ದೇವಾಲಯದ ವಿಗ್ರಹ ಪೂಜಿಸಲು ಪೌರೋಹಿತ್ಯ ಮತ್ತು ಆಚರಣೆಗಳ ತರಬೇತಿಯನ್ನು ನೀಡುತ್ತಿದ್ದಾರೆ.

ಮೂರು ಸುತ್ತಿನ ಸಂದರ್ಶನದ ಮೂಲಕ 3240 ಅಭ್ಯರ್ಥಿಗಳ ಪೈಕಿ 25 ಮಂದಿಯನ್ನು ತರಬೇತಿಗೆ ಆಯ್ಕೆ ಮಾಡಲಾಗಿದೆ. ಸಂದರ್ಶನದಲ್ಲಿ 14 ಪ್ರಶ್ನೆಗಳನ್ನು ಕೇಳಲಾಗಿತ್ತು.

ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ 25 ಯುವಕರನ್ನು ಅರ್ಚಕರ‌ ಹುದ್ದೆಗೆ ನವೆಂಬರ್‌ನಲ್ಲಿ ಆಯ್ಕೆ ಮಾಡಲಾಗಿದೆ. ಇವರಲ್ಲಿ ಆಚಾರ್ಯ ದೈವಜ್ಞ ಕೃಷ್ಣ ಶಾಸ್ತ್ರಿ ಅವರು ಹಿಂದೆ‌ ಸರಿದಿದ್ದಾರೆ.

ರಾಮಲಲ್ಲಾ‌ನ ಪೂಜೆಗೆ ಆಯ್ಕೆಯಾಗಿರುವ ಅರ್ಚಕರು ಮೊಬೈಲ್ ಫೋನ್ ಬಳಸುವಂತಿಲ್ಲ ಅಥವಾ ಯಾವುದೇ ಹೊರಗಿನವರೊಂದಿಗೆ ಸಂಪರ್ಕ ಹೊಂದುವಂತಿಲ್ಲ.

ಅಂದಹಾಗೆ ಮಂದಿರಕ್ಕೆ ಬ್ರಾಹ್ಮಣೇತರರು ಅರ್ಚಕರಾಗಿರುವುದು ಇದೆ ಮೊದಲನೇಲ್ಲ, ದಕ್ಷಿಣ ಭಾರತದ ಬಹುತೇಕ ದೇವಾಲಯಗಳಲ್ಲಿ ಶೇ.70 ಪ್ರತಿಶತದಷ್ಟು ಅರ್ಚಕರು ಬ್ರಾಹ್ಮಣೇತರರು ಎಂಬುದು ಗಮನಾರ್ಹ.

ವಿಶೇಷವೆಂದರೆ ಶೈವ ಸಂಪ್ರದಾಯದ ದೇವಾಲಯಗಳಲ್ಲಿ ಬಹುತೇಕ ಬ್ರಾಹ್ಮಣೇತರ ಅರ್ಚಕರದ್ದೇ ಪ್ರಾಬಲ್ಯವಿರುತ್ತದೆ.

andolanait

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

5 hours ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

5 hours ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

5 hours ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

5 hours ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

5 hours ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

6 hours ago