ರಾಷ್ಟ್ರೀಯ

ಆಯೋಧ್ಯೆ ಅರ್ಚಕರಾಗಿ ಎಸ್‌ಸಿ-ಒಬಿಸಿ ಸಮುದಾಯದವರು ಆಯ್ಕೆ!

ಅಯೋಧ್ಯೆ : ಹಿಂದೂಗಳ ದಶಕಗಳ ಕನಸು ಈಡೇರುತ್ತಿದ್ದು, ಅಯೋಧ್ಯೆ ಶ್ರೀರಾಮಮಂದಿರ ಇದೇ ಜ.22 ರಂದು ಉದ್ಘಾಟನೆಯಾಗಲಿದೆ. ಇದೀಗ ರಾಮಮಂದಿರಕ್ಕೆ ಮಂದಿರಕ್ಕೆ‌ 24 ಅರ್ಚಕರನ್ನು ನೇಮಕ ಮಾಡಲಾಗಿದೆ.

ಅರ್ಚಕರಲ್ಲಿ ಇಬ್ಬರು ಎಸ್‌ಸಿ ಮತ್ತು ಒಬ್ಬರು ಒಬಿಸಿ ಸಮುದಾಯದವರಾಗಿದ್ದು ಮೂರು ತಿಂಗಳ ತರಬೇತಿ ನಂತರ ಈ ಅರ್ಚಕರು ನಿಯೋಜನೆಗೊಳ್ಳಲಿದ್ದಾರೆ.

ಜಾತಿ ಆಧಾರದಲ್ಲಿ ಅರ್ಚಕರನ್ನು ಆಯ್ಕೆ ಮಾಡದೇ, ಕೇವಲ ಅರ್ಹತೆಯ ಆಧಾರದ ಮೇಲೆ ಮಾತ್ರ ಅರ್ಚಕರನ್ನು ಆಯ್ಕೆ ಮಾಡಲಾಗಿದೆ. ರಾಮನಂದಿ ಸಂಪ್ರದಾಯದಂತೆ ಎಲ್ಲ ಅರ್ಚಕರಿಗೂ ಮೂರು ತಿಂಗಳ ತರಬೇತಿ ನೀಡಲಾಗುತ್ತಿದೆ.

ರಾಮಮಂದಿರದ ಮಹಂತ್ ಮಿಥಿಲೇಶ್ ನಂದಿನಿ ಶರಣ್ ಮತ್ತು ಮಹಂತ್ ಸತ್ಯನಾರಾಯಣ ದಾಸ್ ಅವರು ದೇವಾಲಯದ ವಿಗ್ರಹ ಪೂಜಿಸಲು ಪೌರೋಹಿತ್ಯ ಮತ್ತು ಆಚರಣೆಗಳ ತರಬೇತಿಯನ್ನು ನೀಡುತ್ತಿದ್ದಾರೆ.

ಮೂರು ಸುತ್ತಿನ ಸಂದರ್ಶನದ ಮೂಲಕ 3240 ಅಭ್ಯರ್ಥಿಗಳ ಪೈಕಿ 25 ಮಂದಿಯನ್ನು ತರಬೇತಿಗೆ ಆಯ್ಕೆ ಮಾಡಲಾಗಿದೆ. ಸಂದರ್ಶನದಲ್ಲಿ 14 ಪ್ರಶ್ನೆಗಳನ್ನು ಕೇಳಲಾಗಿತ್ತು.

ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ 25 ಯುವಕರನ್ನು ಅರ್ಚಕರ‌ ಹುದ್ದೆಗೆ ನವೆಂಬರ್‌ನಲ್ಲಿ ಆಯ್ಕೆ ಮಾಡಲಾಗಿದೆ. ಇವರಲ್ಲಿ ಆಚಾರ್ಯ ದೈವಜ್ಞ ಕೃಷ್ಣ ಶಾಸ್ತ್ರಿ ಅವರು ಹಿಂದೆ‌ ಸರಿದಿದ್ದಾರೆ.

ರಾಮಲಲ್ಲಾ‌ನ ಪೂಜೆಗೆ ಆಯ್ಕೆಯಾಗಿರುವ ಅರ್ಚಕರು ಮೊಬೈಲ್ ಫೋನ್ ಬಳಸುವಂತಿಲ್ಲ ಅಥವಾ ಯಾವುದೇ ಹೊರಗಿನವರೊಂದಿಗೆ ಸಂಪರ್ಕ ಹೊಂದುವಂತಿಲ್ಲ.

ಅಂದಹಾಗೆ ಮಂದಿರಕ್ಕೆ ಬ್ರಾಹ್ಮಣೇತರರು ಅರ್ಚಕರಾಗಿರುವುದು ಇದೆ ಮೊದಲನೇಲ್ಲ, ದಕ್ಷಿಣ ಭಾರತದ ಬಹುತೇಕ ದೇವಾಲಯಗಳಲ್ಲಿ ಶೇ.70 ಪ್ರತಿಶತದಷ್ಟು ಅರ್ಚಕರು ಬ್ರಾಹ್ಮಣೇತರರು ಎಂಬುದು ಗಮನಾರ್ಹ.

ವಿಶೇಷವೆಂದರೆ ಶೈವ ಸಂಪ್ರದಾಯದ ದೇವಾಲಯಗಳಲ್ಲಿ ಬಹುತೇಕ ಬ್ರಾಹ್ಮಣೇತರ ಅರ್ಚಕರದ್ದೇ ಪ್ರಾಬಲ್ಯವಿರುತ್ತದೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago