ಚಂಡೀಗಢ : ಸುಮಾರು 142 ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಕಾಲೇಜು ಪ್ರಾಂಶುಪಾಲರನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಹರಿಯಾಣ ಜಿಲ್ಲೆಯ ಜಿಂದ್ನಲ್ಲಿ ನಡೆದಿದೆ.
ಹರಿಯಾಣದ ಜಿಂದ್ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಸುಮಾರು 142 ಅಪ್ರಾಪ್ತ ಬಾಲಕೀಯರು ಆರು ವರ್ಷಗಳ ಅವಧಿಯಲ್ಲಿ ಶಾಲೆಯ ಪ್ರಾಂಶುಪಾಲರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಸಮಿತಿ ನಡೆಸಿದ ತನಿಖೆಯಲ್ಲಿ ವಿಷಯ ಬಹಿರಂಗವಾಗಿದೆ.
ಈ ಸಂಬಂಧ ಪ್ರಾಂಶುಪಾಲರು ತಮ್ಮ ಕಚೇರಿಗೆ ನಮ್ಮನ್ನು ಕರೆದು ಲೈಂಗಿಕ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ತಿಳಿಸಿದ್ದಾರೆ.
ಮಹಿಳಾ ಆಯೋಗ ನೀಡಿದ ದೂರಿನ ಮೇರೆಗೆ ನ.06 ರಂದು ಪ್ರಾಂಶುಪಾಲರನ್ನು ಪೋಲಿಸರು ಬಂಧಿಸಿದ್ದರು.
ಶಾಲೆಯ 390 ಹುಡುಗಿಯರಲ್ಲಿ 142 ಮಂದಿ ಹುಡುಗಿಯರು ಪ್ರಾಂಶುಪಾಲರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಈ ದೂರಿನ ಅನ್ವಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ. ಸದ್ಯ ಪ್ರಾಂಶುಪಾಲರು ಪೊಲೀಸರ ಬಂಧನದಲ್ಲಿದ್ದಾರೆ.
ರಾಷ್ಟ್ರಪತಿಗೆ ಪತ್ರ ಬರೆದ ವಿದ್ಯಾರ್ತಿನಿಯರು : ಶಾಲೆಯಲ್ಲಿ ನಡೆಯುಯತ್ತಿದ್ದ ಲೈಂಗಿಕ ಕಿರುಕುಳ ಕುರಿತು ಸುಮಾರು ೧೫ ಮಂದಿ ಬಾಲಕೀಯರು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಆಗಸ್ಟ್ 31 ರಂದು ಪತ್ರ ಬರೆದಿದ್ದರು. ಹಾಗೂ ಪ್ರಧಾನಿ ನರೇಂದ್ರ ಮೋದಿ, ಸಿಜೆಐ ಡಿವೈ ಚಂದ್ರಚೂಡ್, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸೇರಿದಂತೆ ಲೈಂಗಿಕ ಕಿರುಕುಳ ಕೃತ್ಯದ ಕುರಿತು ಪತ್ರ ಬರೆದಿದ್ದರು.
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…
ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…
ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…