ಚಂಡೀಗಢ : ಸುಮಾರು 142 ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಕಾಲೇಜು ಪ್ರಾಂಶುಪಾಲರನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಹರಿಯಾಣ ಜಿಲ್ಲೆಯ ಜಿಂದ್ನಲ್ಲಿ ನಡೆದಿದೆ.
ಹರಿಯಾಣದ ಜಿಂದ್ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಸುಮಾರು 142 ಅಪ್ರಾಪ್ತ ಬಾಲಕೀಯರು ಆರು ವರ್ಷಗಳ ಅವಧಿಯಲ್ಲಿ ಶಾಲೆಯ ಪ್ರಾಂಶುಪಾಲರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಸಮಿತಿ ನಡೆಸಿದ ತನಿಖೆಯಲ್ಲಿ ವಿಷಯ ಬಹಿರಂಗವಾಗಿದೆ.
ಈ ಸಂಬಂಧ ಪ್ರಾಂಶುಪಾಲರು ತಮ್ಮ ಕಚೇರಿಗೆ ನಮ್ಮನ್ನು ಕರೆದು ಲೈಂಗಿಕ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ತಿಳಿಸಿದ್ದಾರೆ.
ಮಹಿಳಾ ಆಯೋಗ ನೀಡಿದ ದೂರಿನ ಮೇರೆಗೆ ನ.06 ರಂದು ಪ್ರಾಂಶುಪಾಲರನ್ನು ಪೋಲಿಸರು ಬಂಧಿಸಿದ್ದರು.
ಶಾಲೆಯ 390 ಹುಡುಗಿಯರಲ್ಲಿ 142 ಮಂದಿ ಹುಡುಗಿಯರು ಪ್ರಾಂಶುಪಾಲರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಈ ದೂರಿನ ಅನ್ವಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ. ಸದ್ಯ ಪ್ರಾಂಶುಪಾಲರು ಪೊಲೀಸರ ಬಂಧನದಲ್ಲಿದ್ದಾರೆ.
ರಾಷ್ಟ್ರಪತಿಗೆ ಪತ್ರ ಬರೆದ ವಿದ್ಯಾರ್ತಿನಿಯರು : ಶಾಲೆಯಲ್ಲಿ ನಡೆಯುಯತ್ತಿದ್ದ ಲೈಂಗಿಕ ಕಿರುಕುಳ ಕುರಿತು ಸುಮಾರು ೧೫ ಮಂದಿ ಬಾಲಕೀಯರು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಆಗಸ್ಟ್ 31 ರಂದು ಪತ್ರ ಬರೆದಿದ್ದರು. ಹಾಗೂ ಪ್ರಧಾನಿ ನರೇಂದ್ರ ಮೋದಿ, ಸಿಜೆಐ ಡಿವೈ ಚಂದ್ರಚೂಡ್, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸೇರಿದಂತೆ ಲೈಂಗಿಕ ಕಿರುಕುಳ ಕೃತ್ಯದ ಕುರಿತು ಪತ್ರ ಬರೆದಿದ್ದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…