ಚಂಡೀಗಢ : ಸುಮಾರು 142 ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಕಾಲೇಜು ಪ್ರಾಂಶುಪಾಲರನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಹರಿಯಾಣ ಜಿಲ್ಲೆಯ ಜಿಂದ್ನಲ್ಲಿ ನಡೆದಿದೆ.
ಹರಿಯಾಣದ ಜಿಂದ್ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಸುಮಾರು 142 ಅಪ್ರಾಪ್ತ ಬಾಲಕೀಯರು ಆರು ವರ್ಷಗಳ ಅವಧಿಯಲ್ಲಿ ಶಾಲೆಯ ಪ್ರಾಂಶುಪಾಲರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಸಮಿತಿ ನಡೆಸಿದ ತನಿಖೆಯಲ್ಲಿ ವಿಷಯ ಬಹಿರಂಗವಾಗಿದೆ.
ಈ ಸಂಬಂಧ ಪ್ರಾಂಶುಪಾಲರು ತಮ್ಮ ಕಚೇರಿಗೆ ನಮ್ಮನ್ನು ಕರೆದು ಲೈಂಗಿಕ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ತಿಳಿಸಿದ್ದಾರೆ.
ಮಹಿಳಾ ಆಯೋಗ ನೀಡಿದ ದೂರಿನ ಮೇರೆಗೆ ನ.06 ರಂದು ಪ್ರಾಂಶುಪಾಲರನ್ನು ಪೋಲಿಸರು ಬಂಧಿಸಿದ್ದರು.
ಶಾಲೆಯ 390 ಹುಡುಗಿಯರಲ್ಲಿ 142 ಮಂದಿ ಹುಡುಗಿಯರು ಪ್ರಾಂಶುಪಾಲರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಈ ದೂರಿನ ಅನ್ವಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ. ಸದ್ಯ ಪ್ರಾಂಶುಪಾಲರು ಪೊಲೀಸರ ಬಂಧನದಲ್ಲಿದ್ದಾರೆ.
ರಾಷ್ಟ್ರಪತಿಗೆ ಪತ್ರ ಬರೆದ ವಿದ್ಯಾರ್ತಿನಿಯರು : ಶಾಲೆಯಲ್ಲಿ ನಡೆಯುಯತ್ತಿದ್ದ ಲೈಂಗಿಕ ಕಿರುಕುಳ ಕುರಿತು ಸುಮಾರು ೧೫ ಮಂದಿ ಬಾಲಕೀಯರು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಆಗಸ್ಟ್ 31 ರಂದು ಪತ್ರ ಬರೆದಿದ್ದರು. ಹಾಗೂ ಪ್ರಧಾನಿ ನರೇಂದ್ರ ಮೋದಿ, ಸಿಜೆಐ ಡಿವೈ ಚಂದ್ರಚೂಡ್, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸೇರಿದಂತೆ ಲೈಂಗಿಕ ಕಿರುಕುಳ ಕೃತ್ಯದ ಕುರಿತು ಪತ್ರ ಬರೆದಿದ್ದರು.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…