ಚಂಡೀಗಢ : ಸುಮಾರು 142 ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಕಾಲೇಜು ಪ್ರಾಂಶುಪಾಲರನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಹರಿಯಾಣ ಜಿಲ್ಲೆಯ ಜಿಂದ್ನಲ್ಲಿ ನಡೆದಿದೆ.
ಹರಿಯಾಣದ ಜಿಂದ್ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಸುಮಾರು 142 ಅಪ್ರಾಪ್ತ ಬಾಲಕೀಯರು ಆರು ವರ್ಷಗಳ ಅವಧಿಯಲ್ಲಿ ಶಾಲೆಯ ಪ್ರಾಂಶುಪಾಲರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಸಮಿತಿ ನಡೆಸಿದ ತನಿಖೆಯಲ್ಲಿ ವಿಷಯ ಬಹಿರಂಗವಾಗಿದೆ.
ಈ ಸಂಬಂಧ ಪ್ರಾಂಶುಪಾಲರು ತಮ್ಮ ಕಚೇರಿಗೆ ನಮ್ಮನ್ನು ಕರೆದು ಲೈಂಗಿಕ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ತಿಳಿಸಿದ್ದಾರೆ.
ಮಹಿಳಾ ಆಯೋಗ ನೀಡಿದ ದೂರಿನ ಮೇರೆಗೆ ನ.06 ರಂದು ಪ್ರಾಂಶುಪಾಲರನ್ನು ಪೋಲಿಸರು ಬಂಧಿಸಿದ್ದರು.
ಶಾಲೆಯ 390 ಹುಡುಗಿಯರಲ್ಲಿ 142 ಮಂದಿ ಹುಡುಗಿಯರು ಪ್ರಾಂಶುಪಾಲರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಈ ದೂರಿನ ಅನ್ವಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ. ಸದ್ಯ ಪ್ರಾಂಶುಪಾಲರು ಪೊಲೀಸರ ಬಂಧನದಲ್ಲಿದ್ದಾರೆ.
ರಾಷ್ಟ್ರಪತಿಗೆ ಪತ್ರ ಬರೆದ ವಿದ್ಯಾರ್ತಿನಿಯರು : ಶಾಲೆಯಲ್ಲಿ ನಡೆಯುಯತ್ತಿದ್ದ ಲೈಂಗಿಕ ಕಿರುಕುಳ ಕುರಿತು ಸುಮಾರು ೧೫ ಮಂದಿ ಬಾಲಕೀಯರು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಆಗಸ್ಟ್ 31 ರಂದು ಪತ್ರ ಬರೆದಿದ್ದರು. ಹಾಗೂ ಪ್ರಧಾನಿ ನರೇಂದ್ರ ಮೋದಿ, ಸಿಜೆಐ ಡಿವೈ ಚಂದ್ರಚೂಡ್, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸೇರಿದಂತೆ ಲೈಂಗಿಕ ಕಿರುಕುಳ ಕೃತ್ಯದ ಕುರಿತು ಪತ್ರ ಬರೆದಿದ್ದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…