Mysore
20
overcast clouds

Social Media

ಬುಧವಾರ, 24 ಜೂನ್ 2026
Light
Dark

ಶಾಹಿ ಈದ್ಗಾ ಮಸೀದಿ ಪ್ರಕರಣ: ಅಲಹಾಬಾದ್‌ ಆದೇಶ ತಡೆಹಿಡಿದ ಸುಪ್ರೀಂ

ಅಲಹಾಬಾದ್‌: ಕೃಷ್ಣಜನ್ಮ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹಿ ಈದ್ಗಾ ಮಸೀದಿ ಸರ್ವೆ ನಡಸಲು ನೇಮಕರನ್ನು ಆಯೋಜಿಸುವ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಡಿಸೆಂಬರ್‌ 14 ರಂದು ಶಾಹೀ ಈದ್ಗಾ ಮಸೀದಿ ಜಾಗದ ಸರ್ವೆ ನಡೆಸಲು ಆಯುಕ್ತರನ್ನು ನೇಮಿಸುವಂತೆ ಅಲಹಾಬಾದ್‌ ಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ದೀಪಾಂಕರ್‌ ದತ್ತಾ ಮತ್ತು ಸಂಜೀವ್‌ ಖ್ನ್ನಾ ಅವರ ಪೀಠವು ತಡೆ ನೀಡಿ ಆದೇಶ ಹೊರಡಿಸಿದೆ.

ಸ್ಥಳೀಯ ಆಯುಕ್ತರ ನೇಮಕಕ್ಕೆ ಹೈಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯು ತುಂಬಾ ಅಸ್ಪಷ್ಟವಾಗಿದೆ. ಪ್ರಕರಣದಲ್ಲಿ ಪರಿಗಣಿಸಲು ಕೆಲವು ಕಾನೂನು ಪ್ರಶ್ನೆಗಳು ಸಹ ಉದ್ಭವಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಅರ್ಜಿಯನ್ನು ತಿರಸ್ಕರಿಸಬೇಕೆಂದು ಕೋರಿ ತಾನು ಸಲ್ಲಿಸಿದ್ದ ಅರ್ಜಿಯ ಕುರಿತು ತೀರ್ಪು ನೀಡುವ ಮುನ್ನವೇ ಅಡ್ವಕೇಟ್ ಕಮಿಷನ‌ರ್ ನೇಮಕಾತಿ ಆದೇಶ ಹೊರಡಿಸಬಾರದಾಗಿತ್ತು ಎಂದು ಮಸೀದಿ ಸಮಿತಿ ವಾದಿಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!