ರಾಷ್ಟ್ರೀಯ

ಉತ್ತರಾಖಂಡ ಸುರಂಗದಿಂದ ಕಾರ್ಮಿಕರ ಸ್ಥಳಾಂತರ: ಕಾರ್ಮಿಕರ ಕಾರ್ಯಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ಡೆಹ್ರಾಡೂನ್ : ಉತ್ತರಕಾಶಿ ಸಮೀಪ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯವು ಸಂಪೂರ್ಣ ಯಶಸ್ವಿಯಾಗಿದ್ದು, ಎಲ್ಲಾ 41 ಕಾರ್ಮಿಕರು ಸುರಂಗದಿಂದ ಹೊರಬಂದಿದ್ದಾರೆ. ಇವರೆಲ್ಲರನ್ನು ಕೂಡಲೇ ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇತ್ತ ಕಾರ್ಮಿಕರು ಹೊರ ಬರುತ್ತಿದ್ದಂತೆ ಕುಟುಂಬಸ್ಥರು ತಮ್ಮವರ ಮುಖಗಳನ್ನು ಕಂಡು ಸಂತಸಪಟ್ಟರು. ತಂದಿದ್ದ ಸಿಹಿಯನ್ನು ಸೇನಾ ಸಿಬ್ಬಂದಿಗೆ ತಿನ್ನಿಸಿ ನಮ್ಮವರನ್ನು ಕಾಪಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಉತ್ತರಕಾಶಿಯಲ್ಲಿ ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ಸುರಂಗದಲ್ಲಿ ಸಿಕ್ಕಿ ಬಿದ್ದಿದ್ದ ಸ್ನೇಹಿತರ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ.

ದೀರ್ಘಾವಧಿ ಸಮಯದ ತಮ್ಮ ತಮ್ಮ ಕುಟುಂಬದ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ಸಂತಸದ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಮೆಚ್ಚುತ್ತೇವೆ.

ಈ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಜನರಿಗೆ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ. ಈ ಕಾರ್ಯಾಚರಣೆಯಲ್ಲಿ ತೊಡಗಿರುವ ಪ್ರತಿಯೊಬ್ಬರ ಮಾನವೀಯತೆ ಮತ್ತು ಕೆಲಸ ಶ್ಲಾಘನೀಯ ಎಂದು ಪ್ರಧಾನಿ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್‌ : “ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ತಿಳಿದು ನನಗೆ ಸಮಾಧಾನ, ಸಂತೋಷವಾಗಿದೆ. ರಕ್ಷಣಾ ಪ್ರಯತ್ನವು ಅಡೆತಡೆಗಳನ್ನು ಎದುರಿಸಿ 17 ದಿನಗಳ ಕಾಲ ಶ್ರಮಕ್ಕೆ ಈ ಕಾರ್ಯಚರಣೆ ಸಾಕ್ಷಿಯಾಗಿದೆ ” ಎಂದು ಹೇಳಿದ್ದಾರೆ.

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

1 hour ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

2 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

2 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

2 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

3 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

3 hours ago