ಡೆಹ್ರಾಡೂನ್ : ಉತ್ತರಕಾಶಿ ಸಮೀಪ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯವು ಸಂಪೂರ್ಣ ಯಶಸ್ವಿಯಾಗಿದ್ದು, ಎಲ್ಲಾ 41 ಕಾರ್ಮಿಕರು ಸುರಂಗದಿಂದ ಹೊರಬಂದಿದ್ದಾರೆ. ಇವರೆಲ್ಲರನ್ನು ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇತ್ತ ಕಾರ್ಮಿಕರು ಹೊರ ಬರುತ್ತಿದ್ದಂತೆ ಕುಟುಂಬಸ್ಥರು ತಮ್ಮವರ ಮುಖಗಳನ್ನು ಕಂಡು ಸಂತಸಪಟ್ಟರು. ತಂದಿದ್ದ ಸಿಹಿಯನ್ನು ಸೇನಾ ಸಿಬ್ಬಂದಿಗೆ ತಿನ್ನಿಸಿ ನಮ್ಮವರನ್ನು ಕಾಪಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದರು.
ಉತ್ತರಕಾಶಿಯಲ್ಲಿ ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ಸುರಂಗದಲ್ಲಿ ಸಿಕ್ಕಿ ಬಿದ್ದಿದ್ದ ಸ್ನೇಹಿತರ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ.
ದೀರ್ಘಾವಧಿ ಸಮಯದ ತಮ್ಮ ತಮ್ಮ ಕುಟುಂಬದ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ಸಂತಸದ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಮೆಚ್ಚುತ್ತೇವೆ.
ಈ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಜನರಿಗೆ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ. ಈ ಕಾರ್ಯಾಚರಣೆಯಲ್ಲಿ ತೊಡಗಿರುವ ಪ್ರತಿಯೊಬ್ಬರ ಮಾನವೀಯತೆ ಮತ್ತು ಕೆಲಸ ಶ್ಲಾಘನೀಯ ಎಂದು ಪ್ರಧಾನಿ ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ : “ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ತಿಳಿದು ನನಗೆ ಸಮಾಧಾನ, ಸಂತೋಷವಾಗಿದೆ. ರಕ್ಷಣಾ ಪ್ರಯತ್ನವು ಅಡೆತಡೆಗಳನ್ನು ಎದುರಿಸಿ 17 ದಿನಗಳ ಕಾಲ ಶ್ರಮಕ್ಕೆ ಈ ಕಾರ್ಯಚರಣೆ ಸಾಕ್ಷಿಯಾಗಿದೆ ” ಎಂದು ಹೇಳಿದ್ದಾರೆ.
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…
ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ…
ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…
ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…
ಚಿಕ್ಕಬಳ್ಳಾಪುರ: ಇಸ್ರೇಲ್ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು,…
ದುಬೈ: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯು ತಾರಕ್ಕೇರಿರುವುದರಿಂದ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಈ…