ರಾಷ್ಟ್ರೀಯ

ಉತ್ತರಾಖಂಡ ಸುರಂಗದಿಂದ ಕಾರ್ಮಿಕರ ಸ್ಥಳಾಂತರ: ಕಾರ್ಮಿಕರ ಕಾರ್ಯಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ಡೆಹ್ರಾಡೂನ್ : ಉತ್ತರಕಾಶಿ ಸಮೀಪ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯವು ಸಂಪೂರ್ಣ ಯಶಸ್ವಿಯಾಗಿದ್ದು, ಎಲ್ಲಾ 41 ಕಾರ್ಮಿಕರು ಸುರಂಗದಿಂದ ಹೊರಬಂದಿದ್ದಾರೆ. ಇವರೆಲ್ಲರನ್ನು ಕೂಡಲೇ ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇತ್ತ ಕಾರ್ಮಿಕರು ಹೊರ ಬರುತ್ತಿದ್ದಂತೆ ಕುಟುಂಬಸ್ಥರು ತಮ್ಮವರ ಮುಖಗಳನ್ನು ಕಂಡು ಸಂತಸಪಟ್ಟರು. ತಂದಿದ್ದ ಸಿಹಿಯನ್ನು ಸೇನಾ ಸಿಬ್ಬಂದಿಗೆ ತಿನ್ನಿಸಿ ನಮ್ಮವರನ್ನು ಕಾಪಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಉತ್ತರಕಾಶಿಯಲ್ಲಿ ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ಸುರಂಗದಲ್ಲಿ ಸಿಕ್ಕಿ ಬಿದ್ದಿದ್ದ ಸ್ನೇಹಿತರ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ.

ದೀರ್ಘಾವಧಿ ಸಮಯದ ತಮ್ಮ ತಮ್ಮ ಕುಟುಂಬದ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ಸಂತಸದ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಮೆಚ್ಚುತ್ತೇವೆ.

ಈ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಜನರಿಗೆ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ. ಈ ಕಾರ್ಯಾಚರಣೆಯಲ್ಲಿ ತೊಡಗಿರುವ ಪ್ರತಿಯೊಬ್ಬರ ಮಾನವೀಯತೆ ಮತ್ತು ಕೆಲಸ ಶ್ಲಾಘನೀಯ ಎಂದು ಪ್ರಧಾನಿ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್‌ : “ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ತಿಳಿದು ನನಗೆ ಸಮಾಧಾನ, ಸಂತೋಷವಾಗಿದೆ. ರಕ್ಷಣಾ ಪ್ರಯತ್ನವು ಅಡೆತಡೆಗಳನ್ನು ಎದುರಿಸಿ 17 ದಿನಗಳ ಕಾಲ ಶ್ರಮಕ್ಕೆ ಈ ಕಾರ್ಯಚರಣೆ ಸಾಕ್ಷಿಯಾಗಿದೆ ” ಎಂದು ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago