ನವದೆಹಲಿ ಪ್ರವಾಸ ಕೈಗೊಂಡಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಡಿಸೆಂಬರ್ 20 ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಬರದ ಕುರಿತು ಚರ್ಚೆ ನಡೆಸಿದ್ದಾರೆ. ಕೂಡಲೇ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ರಾಜ್ಯದ 236 ತಾಲೂಕುಗಳ ಪೈಕಿ 233 ತಾಲೂಕುಗಳು ಬರಪೀಡಿತವಾಗಿವೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶಗಳ ಬೆಲೆ ನಾಶವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಎನ್ಡಿಆರ್ಎಫ್ ಮಾರ್ಗಸೂಚಿಯ ಅನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲು ಪ್ರಸ್ತಾವನೆಯನ್ನು ಸಲ್ಲಿಸಿ ಮೂರು ತಿಂಗಳುಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ 18177.44 ಕೋಟಿ ಬರ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.
ಈ ಮೊತ್ತದ ಪೈಕಿ 4663.12 ಕೋಟಿ ಇನ್ಪುಟ್ ಸಬ್ಸಿಡಿ, 12577.86 ಕೋಟಿ ತುರ್ತು ಪರಿಹಾರ, 566.78 ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ಜಾನುವಾರಗಳ ಸಂರಕ್ಷಣೆಗಾಗಿ ಎಂದು ತಿಳಿದುಬಂದಿದೆ.
ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…
ಟೆಹರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…
ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…