ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿರುವ ಸಂಸತ್ ಭವನದ ಮೇಲಿನ ದಾಳಿ ಕುರಿತು ವಿವಿಧ ರಾಜಕಾರಣಿಗಳು ಪ್ರತಿಕ್ರಿಯಿಸುತ್ತಿದ್ದಾರೆ. ಸಂಸತ್ ಪ್ರವೇಶಿಸಲು ಆರೋಪಿಗಳು ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದಿರುವ ಕಾರಣ ಕಾಂಗ್ರೆಸ್ಸಿಗರು ಪ್ರತಾಪ್ ಸಿಂಹ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರೆ, ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಪ್ರತಾಪ್ ಸಿಂಹ ಪರ ಬ್ಯಾಟ್ ಬೀಸಿದ್ದಾರೆ.
ಇದೀಗ ರಾಜ್ಯಸಭಾ ಸದಸ್ಯ, ಬಿಜೆಪಿಯ ಲೆಹರ್ ಸಿಂಗ್ ಸಿರೋಯಾ ಈ ಕುರಿತು ಪ್ರತಿಕ್ರಿಯಿಸಿದ್ದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದಾರೆ. ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಲೆಹರ್ ಸಿಂಗ್ ಸಿರೋಯಾ ಪ್ರತಾಪ್ ಸಿಂಹ ಅವರನ್ನು ಟ್ರ್ಯಾಪ್ ಮಾಡಲಾಗಿದೆ, ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪುತ್ರ ಸ್ಪರ್ಧೆ ಮಾಡಲಿದ್ದಾರೆ, ಹೀಗಾಗಿ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿದ ಲೆಹರ್ ಸಿಂಗ್ ಸಿರೋಯಾ ಸಿದ್ದರಾಮಯ್ಯ ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ, ಭಾರತ್ ಜೋಡೊ ಯಾತ್ರೆಯಲ್ಲಿ ಸಹ ಆ ಅರ್ಬನ್ ನಕ್ಸಲರು ಭಾಗಿಯಾಗಿದ್ದರು ಎಂದರು. ಸಂಸತ್ನಲ್ಲಿ ಗಲಾಟೆಯಾಗಿ ಕೇವಲ 15 ನಿಮಿಷ ಕಳೆಯುವಷ್ಟರಲ್ಲಿಯೇ ಕಾಂಗ್ರೆಸ್ನವರು ಪ್ರತಿಭಟನೆ ಮಾಡಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…