ರಾಷ್ಟ್ರೀಯ

ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ :6 ರಾಜ್ಯಗಳಲ್ಲಿ ಫೀಲ್ಡ್‌ಗಿಳಿದ ವಿಶೇಷ ತಂಡ

ನವದೆಹಲಿ : ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇದೀಗ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿಸೆಂಬರ್ 13 ರಂದು ನಡೆದ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯ ತನಿಖೆಗಾಗಿ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡಗಳು ರಾಜಸ್ಥಾನ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತನಿಖೆ ನಡೆಸಲಿದೆ.

ಸಂಸತ್ ಭವನದಲ್ಲಿ ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಭದ್ರತಾ ಲೋಪ ಎದುರಾಗಿತ್ತು, ಇಬ್ಬರು ಅಪರಿಚಿತರು ಲೋಕಸಭೆಯಿಂದ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ನೆಗೆದು ಕುರ್ಚಿಯಿಂದ ಕುರ್ಚಿಗೆ ಎಗರುತ್ತಾ ಬಣ್ಣಗಳ ಹೊಗೆ ಬರುವ ವಸ್ತುಗಳನ್ನ ಸಿಡಿಸಿದ್ದರು.

ಇದರಿಂದ ಬೆದರಿದ ಸಂಸದರು ಸಂಸತ್ ಭವನದಿಂದ ಹೊರಗೆ ಓಡಿ ಹೋಗಿದ್ದರು. ಅಲ್ಲದೇ ಸಂಸತ್ ಭವನದ ಹೊರಗಡೆ ಇಬ್ಬರು ಹೊಗೆ ಸೂಸುವ ಡಬ್ಬಿಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸಂಬಂಧ ಇದುವರೆಗೆ 6 ಮಂದಿಯನ್ನು ಬಂಧಿಸಲಾಗಿದೆ.

ಸಂಸತ್ ದಾಳಿ ಗಂಭೀರ ವಿಷಯವಾಗಿದ್ದು, ಇದರ ಹಿಂದಿನ ಉದ್ದೇಶ ಗೊತ್ತಾಗಬೇಕು , ದಾಳಿ ಹಿಂದಿನ ವ್ಯಕ್ತಿಗಳು/ಸಂಘಟನೆಗಳು ಹಾಗೂ ಅವರ ಉದ್ದೇಶ ಏನು ಎಂಬುದು ಸಂಪೂರ್ಣವಾಗಿ ಬಹಿರಂಗವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago