ನವದೆಹಲಿ : ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇದೀಗ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಡಿಸೆಂಬರ್ 13 ರಂದು ನಡೆದ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯ ತನಿಖೆಗಾಗಿ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡಗಳು ರಾಜಸ್ಥಾನ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತನಿಖೆ ನಡೆಸಲಿದೆ.
ಸಂಸತ್ ಭವನದಲ್ಲಿ ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಭದ್ರತಾ ಲೋಪ ಎದುರಾಗಿತ್ತು, ಇಬ್ಬರು ಅಪರಿಚಿತರು ಲೋಕಸಭೆಯಿಂದ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ನೆಗೆದು ಕುರ್ಚಿಯಿಂದ ಕುರ್ಚಿಗೆ ಎಗರುತ್ತಾ ಬಣ್ಣಗಳ ಹೊಗೆ ಬರುವ ವಸ್ತುಗಳನ್ನ ಸಿಡಿಸಿದ್ದರು.
ಇದರಿಂದ ಬೆದರಿದ ಸಂಸದರು ಸಂಸತ್ ಭವನದಿಂದ ಹೊರಗೆ ಓಡಿ ಹೋಗಿದ್ದರು. ಅಲ್ಲದೇ ಸಂಸತ್ ಭವನದ ಹೊರಗಡೆ ಇಬ್ಬರು ಹೊಗೆ ಸೂಸುವ ಡಬ್ಬಿಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸಂಬಂಧ ಇದುವರೆಗೆ 6 ಮಂದಿಯನ್ನು ಬಂಧಿಸಲಾಗಿದೆ.
ಸಂಸತ್ ದಾಳಿ ಗಂಭೀರ ವಿಷಯವಾಗಿದ್ದು, ಇದರ ಹಿಂದಿನ ಉದ್ದೇಶ ಗೊತ್ತಾಗಬೇಕು , ದಾಳಿ ಹಿಂದಿನ ವ್ಯಕ್ತಿಗಳು/ಸಂಘಟನೆಗಳು ಹಾಗೂ ಅವರ ಉದ್ದೇಶ ಏನು ಎಂಬುದು ಸಂಪೂರ್ಣವಾಗಿ ಬಹಿರಂಗವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…