ನವದೆಹಲಿ : ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇದೀಗ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಡಿಸೆಂಬರ್ 13 ರಂದು ನಡೆದ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯ ತನಿಖೆಗಾಗಿ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡಗಳು ರಾಜಸ್ಥಾನ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತನಿಖೆ ನಡೆಸಲಿದೆ.
ಸಂಸತ್ ಭವನದಲ್ಲಿ ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಭದ್ರತಾ ಲೋಪ ಎದುರಾಗಿತ್ತು, ಇಬ್ಬರು ಅಪರಿಚಿತರು ಲೋಕಸಭೆಯಿಂದ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ನೆಗೆದು ಕುರ್ಚಿಯಿಂದ ಕುರ್ಚಿಗೆ ಎಗರುತ್ತಾ ಬಣ್ಣಗಳ ಹೊಗೆ ಬರುವ ವಸ್ತುಗಳನ್ನ ಸಿಡಿಸಿದ್ದರು.
ಇದರಿಂದ ಬೆದರಿದ ಸಂಸದರು ಸಂಸತ್ ಭವನದಿಂದ ಹೊರಗೆ ಓಡಿ ಹೋಗಿದ್ದರು. ಅಲ್ಲದೇ ಸಂಸತ್ ಭವನದ ಹೊರಗಡೆ ಇಬ್ಬರು ಹೊಗೆ ಸೂಸುವ ಡಬ್ಬಿಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸಂಬಂಧ ಇದುವರೆಗೆ 6 ಮಂದಿಯನ್ನು ಬಂಧಿಸಲಾಗಿದೆ.
ಸಂಸತ್ ದಾಳಿ ಗಂಭೀರ ವಿಷಯವಾಗಿದ್ದು, ಇದರ ಹಿಂದಿನ ಉದ್ದೇಶ ಗೊತ್ತಾಗಬೇಕು , ದಾಳಿ ಹಿಂದಿನ ವ್ಯಕ್ತಿಗಳು/ಸಂಘಟನೆಗಳು ಹಾಗೂ ಅವರ ಉದ್ದೇಶ ಏನು ಎಂಬುದು ಸಂಪೂರ್ಣವಾಗಿ ಬಹಿರಂಗವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…