ರಾಷ್ಟ್ರೀಯ

ಹೆತ್ತ ಮಗನನ್ನೇ ಕೊಲೆಗೈದು ಸೂಟ್‌ಕೇಸ್‌ನಲ್ಲಿಟ್ಟ ತಾಯಿ!

ತಾಯಿಯೊಬ್ಬಳು 4 ವರ್ಷ ವಯಸ್ಸಿನ ಹೆತ್ತ ಮಗನನ್ನೇ ಕೊಂದು ಆತನ ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಲು ಯತ್ನಿಸಿದ ಅಮಾನವೀಯ ಘಟನೆಯೊಂದು ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿದ್ದ ಸ್ಟಾರ್ಟ್‌ಅಪ್‌ ಕಂಪನಿ ಸಿಇಒ ಸುಚನಾ ಸೇಠ್‌ ಈ ಕೊಲೆಯನ್ನು ಮಾಡಿದ್ದಾರೆ.

ಮೂಲತಃ ಪಶ್ಚಿಮ ಬಂಗಾಳದ ಸುಚನಾ 2009ರಲ್ಲಿ ಬೆಂಗಳೂರಿಗೆ ಬಂದು ನೆಲೆಸಿ ಸ್ಟಾರ್ಟ್‌ಅಪ್‌ ಆರಂಭಿಸಿದ್ದಾರೆ. ತಮಿಳುನಾಡು ಮೂಲದ ಟೆಕ್ಕಿ ವೆಂಕಟರಮಣ ಜತೆ ಸುಚನಾ 2010ರಲ್ಲಿ ವಿವಾಹವಾಗಿದ್ದಾರೆ. ಈ ದಂಪತಿಗೆ 2019ರಲ್ಲಿ ಒಂದು ಗಂಡು ಮಗು ಸಹ ಜನಿಸಿದ್ದು, 2020ರಲ್ಲಿ ವಿವಾಹ ವಿಚ್ಛೇದನ ಪಡೆದುಕೊಂಡಿದ್ದರು.

ಹೀಗೆ ಗಂಡನಿಂದ ದೂರಾಗಿ ಮೂರ್ನಾಲ್ಕು ವರ್ಷ ಕಳೆದ ನಂತರ ಇದೀಗ ಸುಚನಾ ತನ್ನ ಮಗುವನ್ನು ತಾನೇ ಗೋವಾದ ಹೊಟೇಲ್‌ವೊಂದರಲ್ಲಿ ಕೊಂದು ಆತನ ದೇಹವನ್ನು ಸೂಟ್‌ಕೇಸ್‌ ಮೂಲಕ ಸಾಗಿಸಲು ಮುಂದಾಗಿದ್ದಾರೆ. ಹೊಟೇಲ್‌ವೊಂದರಲ್ಲಿ ಮಗನ ಜತೆ ತಂಗಿದ್ದ ಸುಚನಾ ಚೆಕ್‌ಔಟ್‌ ಆಗುವಾಗ ಮಗು ಇಲ್ಲದೇ ತೆರಳುವುದನ್ನು ನೋಡಿದ ಹೊಟೇಲ್‌ ಸಿಬ್ಬಂದಿ ನಿಮ್ಮ ಜತೆ ಬಂದಿದ್ದ ಮಗು ಎಲ್ಲಿ ಎಂದು ಕೇಳಿದ್ದಾರೆ. ಇದಕ್ಕುತ್ತರಿಸಿದ ಸುಚನಾ ಮಗುವನ್ನು ತನ್ನ ಸಂಬಂಧಿಕರ ಜತೆ ಕಳುಹಿಸಿದ್ದೇನೆ ಎಂದು ಹೇಳಿ ಟ್ಯಾಕ್ಸಿ ಹತ್ತಿ ಅಲ್ಲಿಂದ ಹೊರಟಿದ್ದಾಳೆ.

ಆದರೆ ಅನುಮಾನಗೊಂಡ ಹೊಟೇಲ್‌ ಸಿಬ್ಬಂದಿ ಸುಚನಾ ಇದ್ದ ರೂಮಿಗೆ ತೆರಳಿ ರಕ್ತದ ಕಲೆಗಳನ್ನು ಕಂಡು ಕೂಡಲೇ ಗೋವಾ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರು ಸುಚನಾ ನಂಬರ್‌ ಟ್ರ್ಯಾಕ್‌ ಮಾಡಿ, ಆಕೆ ಪಯಣಿಸುತ್ತಿದ್ದ ಕಾರ್‌ ಡ್ರೈವರ್‌ನ ನಂಬರ್‌ ಸಂಗ್ರಹಿಸಿ ಕರೆ ಮಾಡಿ ಮುಂದೆ ಬರುವ ಠಾಣೆಯಲ್ಲಿ ಕಾರು ನಿಲ್ಲಿಸುವಂತೆ ಹೇಳಿದ್ದಾರೆ. ಅದರಂತೆ ಚಾಲಕ ಐಮಂಗಲ ಪೊಲೀಸ್ ಠಾಣೆಯಲ್ಲಿ ಕಾರು ನಿಲ್ಲಿಸಿದ್ದು ಸುಚನಾರನ್ನು ಪೊಲೀಸರು ಬಂಧಿಸಿದರು ಹಾಗೂ ಸೂಟ್‌ಕೇಸ್‌ನಲ್ಲಿದ್ದ ಮಗುವಿನ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಇನ್ನು ವಿವಾಹ ವಿಚ್ಛೇದನವಾದ ಬಳಿಕ ಕೋರ್ಟ್‌ ಭಾನುವಾರದಂದು ಮಗುವಿನ ತಂದೆ ಮಗುವನ್ನು ನೋಡಬಹುದು, ಭೇಟಿಯಾಗಬಹುದು ಎಂದು ತೀರ್ಮಾನವನ್ನು ಮಾಡಿತ್ತು. ಅದರೆ ಕೋರ್ಟ್‌ನ ಈ ನಿರ್ಧಾರ ಸುಚನಾಗೆ ಇಷ್ಟವಿರಲಿಲ್ಲ. ಈ ಉದ್ದೇಶದಿಂದಲೇ ತನ್ನ ಮಗುವನ್ನೇ ಸುಚನಾ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

andolana

Recent Posts

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…

8 mins ago

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…

45 mins ago

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…

1 hour ago

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…

2 hours ago

ಅಕ್ರಮ ಭೂ ಪರಿಹಾರ ವಿತರಣೆ ಸಾಬೀತು : ವಸೂಲಿಗೆ ಕ್ರಮವಹಿಸಲು ಆದೇಶ

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…

2 hours ago

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

2 hours ago