ರಾಷ್ಟ್ರೀಯ

ಹೆತ್ತ ಮಗನನ್ನೇ ಕೊಲೆಗೈದು ಸೂಟ್‌ಕೇಸ್‌ನಲ್ಲಿಟ್ಟ ತಾಯಿ!

ತಾಯಿಯೊಬ್ಬಳು 4 ವರ್ಷ ವಯಸ್ಸಿನ ಹೆತ್ತ ಮಗನನ್ನೇ ಕೊಂದು ಆತನ ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಲು ಯತ್ನಿಸಿದ ಅಮಾನವೀಯ ಘಟನೆಯೊಂದು ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿದ್ದ ಸ್ಟಾರ್ಟ್‌ಅಪ್‌ ಕಂಪನಿ ಸಿಇಒ ಸುಚನಾ ಸೇಠ್‌ ಈ ಕೊಲೆಯನ್ನು ಮಾಡಿದ್ದಾರೆ.

ಮೂಲತಃ ಪಶ್ಚಿಮ ಬಂಗಾಳದ ಸುಚನಾ 2009ರಲ್ಲಿ ಬೆಂಗಳೂರಿಗೆ ಬಂದು ನೆಲೆಸಿ ಸ್ಟಾರ್ಟ್‌ಅಪ್‌ ಆರಂಭಿಸಿದ್ದಾರೆ. ತಮಿಳುನಾಡು ಮೂಲದ ಟೆಕ್ಕಿ ವೆಂಕಟರಮಣ ಜತೆ ಸುಚನಾ 2010ರಲ್ಲಿ ವಿವಾಹವಾಗಿದ್ದಾರೆ. ಈ ದಂಪತಿಗೆ 2019ರಲ್ಲಿ ಒಂದು ಗಂಡು ಮಗು ಸಹ ಜನಿಸಿದ್ದು, 2020ರಲ್ಲಿ ವಿವಾಹ ವಿಚ್ಛೇದನ ಪಡೆದುಕೊಂಡಿದ್ದರು.

ಹೀಗೆ ಗಂಡನಿಂದ ದೂರಾಗಿ ಮೂರ್ನಾಲ್ಕು ವರ್ಷ ಕಳೆದ ನಂತರ ಇದೀಗ ಸುಚನಾ ತನ್ನ ಮಗುವನ್ನು ತಾನೇ ಗೋವಾದ ಹೊಟೇಲ್‌ವೊಂದರಲ್ಲಿ ಕೊಂದು ಆತನ ದೇಹವನ್ನು ಸೂಟ್‌ಕೇಸ್‌ ಮೂಲಕ ಸಾಗಿಸಲು ಮುಂದಾಗಿದ್ದಾರೆ. ಹೊಟೇಲ್‌ವೊಂದರಲ್ಲಿ ಮಗನ ಜತೆ ತಂಗಿದ್ದ ಸುಚನಾ ಚೆಕ್‌ಔಟ್‌ ಆಗುವಾಗ ಮಗು ಇಲ್ಲದೇ ತೆರಳುವುದನ್ನು ನೋಡಿದ ಹೊಟೇಲ್‌ ಸಿಬ್ಬಂದಿ ನಿಮ್ಮ ಜತೆ ಬಂದಿದ್ದ ಮಗು ಎಲ್ಲಿ ಎಂದು ಕೇಳಿದ್ದಾರೆ. ಇದಕ್ಕುತ್ತರಿಸಿದ ಸುಚನಾ ಮಗುವನ್ನು ತನ್ನ ಸಂಬಂಧಿಕರ ಜತೆ ಕಳುಹಿಸಿದ್ದೇನೆ ಎಂದು ಹೇಳಿ ಟ್ಯಾಕ್ಸಿ ಹತ್ತಿ ಅಲ್ಲಿಂದ ಹೊರಟಿದ್ದಾಳೆ.

ಆದರೆ ಅನುಮಾನಗೊಂಡ ಹೊಟೇಲ್‌ ಸಿಬ್ಬಂದಿ ಸುಚನಾ ಇದ್ದ ರೂಮಿಗೆ ತೆರಳಿ ರಕ್ತದ ಕಲೆಗಳನ್ನು ಕಂಡು ಕೂಡಲೇ ಗೋವಾ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರು ಸುಚನಾ ನಂಬರ್‌ ಟ್ರ್ಯಾಕ್‌ ಮಾಡಿ, ಆಕೆ ಪಯಣಿಸುತ್ತಿದ್ದ ಕಾರ್‌ ಡ್ರೈವರ್‌ನ ನಂಬರ್‌ ಸಂಗ್ರಹಿಸಿ ಕರೆ ಮಾಡಿ ಮುಂದೆ ಬರುವ ಠಾಣೆಯಲ್ಲಿ ಕಾರು ನಿಲ್ಲಿಸುವಂತೆ ಹೇಳಿದ್ದಾರೆ. ಅದರಂತೆ ಚಾಲಕ ಐಮಂಗಲ ಪೊಲೀಸ್ ಠಾಣೆಯಲ್ಲಿ ಕಾರು ನಿಲ್ಲಿಸಿದ್ದು ಸುಚನಾರನ್ನು ಪೊಲೀಸರು ಬಂಧಿಸಿದರು ಹಾಗೂ ಸೂಟ್‌ಕೇಸ್‌ನಲ್ಲಿದ್ದ ಮಗುವಿನ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಇನ್ನು ವಿವಾಹ ವಿಚ್ಛೇದನವಾದ ಬಳಿಕ ಕೋರ್ಟ್‌ ಭಾನುವಾರದಂದು ಮಗುವಿನ ತಂದೆ ಮಗುವನ್ನು ನೋಡಬಹುದು, ಭೇಟಿಯಾಗಬಹುದು ಎಂದು ತೀರ್ಮಾನವನ್ನು ಮಾಡಿತ್ತು. ಅದರೆ ಕೋರ್ಟ್‌ನ ಈ ನಿರ್ಧಾರ ಸುಚನಾಗೆ ಇಷ್ಟವಿರಲಿಲ್ಲ. ಈ ಉದ್ದೇಶದಿಂದಲೇ ತನ್ನ ಮಗುವನ್ನೇ ಸುಚನಾ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago