ರಾಷ್ಟ್ರೀಯ

ವಿದ್ಯುತ್ ಮೇಲೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ : ಕೇಂದ್ರ

ನವದೆಹಲಿ : ವಿವಿಧ ಮೂಲಗಳಿಂದ ಉತ್ಪಾದನೆಗೊಳ್ಳುವ ವಿದ್ಯುತ್ ಮೇಲೆ ತೆರಿಗೆ, ಸುಂಕ ಸೇರಂದಂತೆ ಯಾವುದೇ ಹೆಚ್ಚುವರಿ ಕಂದಾಯ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೇಂದ್ರ ಇಂಧನ ಸಚಿವಾಲಯ ಅಕ್ಟೋಬರ್ 25ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರವು ಯಾವುದೇ ತೆರಿಗೆ ವಿಧಿಸಬಾರದೆಂದು ತಾಕೀತು ಮಾಡಲಾಗಿದೆ. ರಾಜ್ಯಗಳ ವ್ಯಾಪ್ತಿಯಲ್ಲಿ ಉತ್ಪಾದನೆಗೊಳ್ಳುವ ವಿದ್ಯುತ್ ಅನ್ನು ಅನ್ಯ ರಾಜ್ಯಗಳಿಗೆ ಮಾರಾಟ ಅಥವಾ ಸರಬರಾಜು ಮಾಡುವ ವೇಳೆ ಹಚ್ಚುವರಿ ತೆರಿಗೆ ವಿಧಿಸುತ್ತಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ.

ಈ ರೀತಿ ತೆರಿಗೆ ವಿಸುವುದು ಕಾನೂನು ಬಾಹಿರ ಮತ್ತು ಅಸಂವಿಧಾನಿಕವಾಗಿದೆ ಎಂದು ತಿಳಿಯಲಾಗಿದೆ. ಉಷ್ಣ, ಜಲ, ಪವನ, ಸೌರ, ಅಣು ಸೇರಿದಂತೆ ಹಲವು ಮಾದರಿಗಳಲ್ಲಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುವಾಗ ಸೆಸ್, ಲೇವಿ ಟ್ಯಾಕ್ಸ್, ಶುಲ್ಕ , ಸುಂಕ, ಹೆಚ್ಚುವರಿ ತೆರಿಗೆ ಸೇವಾ ತೆರಿಗೆ ಸೇರಿದಂತೆ ವಿವಿಧ ಮಾದರಿಯಲ್ಲಿ ದರ ನಿಗದಿ ಮಾಡಿರುವುದು ಕಂಡು ಬಂದಿದೆ.

ಕೇಂದ್ರ ವಿದ್ಯುತ್ ಕಾಯಿದೆಯ ಪರಿಚ್ಛೇದ 7ರ ಪ್ರಕಾರ ಈ ರೀತಿ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲವೆಂದು ತಿಳಿಸಿದೆ. ಸಂವಿಧಾನದ ಕಲಂ -286ನ್ನು ಕೂಡ ಉಲ್ಲೇಖಿಸಿದ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆಯನ್ನು ಪರಿಷ್ಕರಣೆ ಮಾಡಲು ಅವಕಾಶ ಇಲ್ಲ. ಹೊರ ರಾಜ್ಯಗಳಿಗೆ ಸರಬರಾಜು ಮಾಡಲು ಮತ್ತು ನಿಗತ ಶುಲ್ಕ ವಸೂಲಿಗೆ ಅವಕಾಶ ಇದೆ.

ಕೇಂದ್ರದ ಘಟಕಗಳಿಂದ ಉತ್ಪಾದನೆಯಾಗುವ ವಿದ್ಯುತನ್ನು ಖರೀದಿಸುವ ರಾಜ್ಯ ಸರ್ಕಾರಗಳು ಅದನ್ನು ಮರಳಿ ಅನ್ಯ ರಾಜ್ಯಗಳಿಗೆ ಪೂರೈಸುವ ವೇಳೆ ಹೆಚ್ಚುವರಿ ತೆರಿಗೆ ವಿಸುತ್ತಿರುವುದು ಕಂಡು ಬಂದಿದೆ. ಇಂದಿನ ದಿನಗಳಲ್ಲಿ ಈ ರೀತಿಯ ನಡವಳಿಕೆಗಳನ್ನು ಪುನರಾವರ್ತಿಸಬಾರೆಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

andolanait

Recent Posts

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

8 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

20 mins ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

34 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

37 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

1 hour ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago