ರಾಷ್ಟ್ರೀಯ

ವಿದ್ಯುತ್ ಮೇಲೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ : ಕೇಂದ್ರ

ನವದೆಹಲಿ : ವಿವಿಧ ಮೂಲಗಳಿಂದ ಉತ್ಪಾದನೆಗೊಳ್ಳುವ ವಿದ್ಯುತ್ ಮೇಲೆ ತೆರಿಗೆ, ಸುಂಕ ಸೇರಂದಂತೆ ಯಾವುದೇ ಹೆಚ್ಚುವರಿ ಕಂದಾಯ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೇಂದ್ರ ಇಂಧನ ಸಚಿವಾಲಯ ಅಕ್ಟೋಬರ್ 25ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರವು ಯಾವುದೇ ತೆರಿಗೆ ವಿಧಿಸಬಾರದೆಂದು ತಾಕೀತು ಮಾಡಲಾಗಿದೆ. ರಾಜ್ಯಗಳ ವ್ಯಾಪ್ತಿಯಲ್ಲಿ ಉತ್ಪಾದನೆಗೊಳ್ಳುವ ವಿದ್ಯುತ್ ಅನ್ನು ಅನ್ಯ ರಾಜ್ಯಗಳಿಗೆ ಮಾರಾಟ ಅಥವಾ ಸರಬರಾಜು ಮಾಡುವ ವೇಳೆ ಹಚ್ಚುವರಿ ತೆರಿಗೆ ವಿಧಿಸುತ್ತಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ.

ಈ ರೀತಿ ತೆರಿಗೆ ವಿಸುವುದು ಕಾನೂನು ಬಾಹಿರ ಮತ್ತು ಅಸಂವಿಧಾನಿಕವಾಗಿದೆ ಎಂದು ತಿಳಿಯಲಾಗಿದೆ. ಉಷ್ಣ, ಜಲ, ಪವನ, ಸೌರ, ಅಣು ಸೇರಿದಂತೆ ಹಲವು ಮಾದರಿಗಳಲ್ಲಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುವಾಗ ಸೆಸ್, ಲೇವಿ ಟ್ಯಾಕ್ಸ್, ಶುಲ್ಕ , ಸುಂಕ, ಹೆಚ್ಚುವರಿ ತೆರಿಗೆ ಸೇವಾ ತೆರಿಗೆ ಸೇರಿದಂತೆ ವಿವಿಧ ಮಾದರಿಯಲ್ಲಿ ದರ ನಿಗದಿ ಮಾಡಿರುವುದು ಕಂಡು ಬಂದಿದೆ.

ಕೇಂದ್ರ ವಿದ್ಯುತ್ ಕಾಯಿದೆಯ ಪರಿಚ್ಛೇದ 7ರ ಪ್ರಕಾರ ಈ ರೀತಿ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲವೆಂದು ತಿಳಿಸಿದೆ. ಸಂವಿಧಾನದ ಕಲಂ -286ನ್ನು ಕೂಡ ಉಲ್ಲೇಖಿಸಿದ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆಯನ್ನು ಪರಿಷ್ಕರಣೆ ಮಾಡಲು ಅವಕಾಶ ಇಲ್ಲ. ಹೊರ ರಾಜ್ಯಗಳಿಗೆ ಸರಬರಾಜು ಮಾಡಲು ಮತ್ತು ನಿಗತ ಶುಲ್ಕ ವಸೂಲಿಗೆ ಅವಕಾಶ ಇದೆ.

ಕೇಂದ್ರದ ಘಟಕಗಳಿಂದ ಉತ್ಪಾದನೆಯಾಗುವ ವಿದ್ಯುತನ್ನು ಖರೀದಿಸುವ ರಾಜ್ಯ ಸರ್ಕಾರಗಳು ಅದನ್ನು ಮರಳಿ ಅನ್ಯ ರಾಜ್ಯಗಳಿಗೆ ಪೂರೈಸುವ ವೇಳೆ ಹೆಚ್ಚುವರಿ ತೆರಿಗೆ ವಿಸುತ್ತಿರುವುದು ಕಂಡು ಬಂದಿದೆ. ಇಂದಿನ ದಿನಗಳಲ್ಲಿ ಈ ರೀತಿಯ ನಡವಳಿಕೆಗಳನ್ನು ಪುನರಾವರ್ತಿಸಬಾರೆಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

andolanait

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

3 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

28 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

32 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

46 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

52 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago