ರಾಷ್ಟ್ರೀಯ

ವಿದ್ಯುತ್ ಮೇಲೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ : ಕೇಂದ್ರ

ನವದೆಹಲಿ : ವಿವಿಧ ಮೂಲಗಳಿಂದ ಉತ್ಪಾದನೆಗೊಳ್ಳುವ ವಿದ್ಯುತ್ ಮೇಲೆ ತೆರಿಗೆ, ಸುಂಕ ಸೇರಂದಂತೆ ಯಾವುದೇ ಹೆಚ್ಚುವರಿ ಕಂದಾಯ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೇಂದ್ರ ಇಂಧನ ಸಚಿವಾಲಯ ಅಕ್ಟೋಬರ್ 25ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರವು ಯಾವುದೇ ತೆರಿಗೆ ವಿಧಿಸಬಾರದೆಂದು ತಾಕೀತು ಮಾಡಲಾಗಿದೆ. ರಾಜ್ಯಗಳ ವ್ಯಾಪ್ತಿಯಲ್ಲಿ ಉತ್ಪಾದನೆಗೊಳ್ಳುವ ವಿದ್ಯುತ್ ಅನ್ನು ಅನ್ಯ ರಾಜ್ಯಗಳಿಗೆ ಮಾರಾಟ ಅಥವಾ ಸರಬರಾಜು ಮಾಡುವ ವೇಳೆ ಹಚ್ಚುವರಿ ತೆರಿಗೆ ವಿಧಿಸುತ್ತಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ.

ಈ ರೀತಿ ತೆರಿಗೆ ವಿಸುವುದು ಕಾನೂನು ಬಾಹಿರ ಮತ್ತು ಅಸಂವಿಧಾನಿಕವಾಗಿದೆ ಎಂದು ತಿಳಿಯಲಾಗಿದೆ. ಉಷ್ಣ, ಜಲ, ಪವನ, ಸೌರ, ಅಣು ಸೇರಿದಂತೆ ಹಲವು ಮಾದರಿಗಳಲ್ಲಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುವಾಗ ಸೆಸ್, ಲೇವಿ ಟ್ಯಾಕ್ಸ್, ಶುಲ್ಕ , ಸುಂಕ, ಹೆಚ್ಚುವರಿ ತೆರಿಗೆ ಸೇವಾ ತೆರಿಗೆ ಸೇರಿದಂತೆ ವಿವಿಧ ಮಾದರಿಯಲ್ಲಿ ದರ ನಿಗದಿ ಮಾಡಿರುವುದು ಕಂಡು ಬಂದಿದೆ.

ಕೇಂದ್ರ ವಿದ್ಯುತ್ ಕಾಯಿದೆಯ ಪರಿಚ್ಛೇದ 7ರ ಪ್ರಕಾರ ಈ ರೀತಿ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲವೆಂದು ತಿಳಿಸಿದೆ. ಸಂವಿಧಾನದ ಕಲಂ -286ನ್ನು ಕೂಡ ಉಲ್ಲೇಖಿಸಿದ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆಯನ್ನು ಪರಿಷ್ಕರಣೆ ಮಾಡಲು ಅವಕಾಶ ಇಲ್ಲ. ಹೊರ ರಾಜ್ಯಗಳಿಗೆ ಸರಬರಾಜು ಮಾಡಲು ಮತ್ತು ನಿಗತ ಶುಲ್ಕ ವಸೂಲಿಗೆ ಅವಕಾಶ ಇದೆ.

ಕೇಂದ್ರದ ಘಟಕಗಳಿಂದ ಉತ್ಪಾದನೆಯಾಗುವ ವಿದ್ಯುತನ್ನು ಖರೀದಿಸುವ ರಾಜ್ಯ ಸರ್ಕಾರಗಳು ಅದನ್ನು ಮರಳಿ ಅನ್ಯ ರಾಜ್ಯಗಳಿಗೆ ಪೂರೈಸುವ ವೇಳೆ ಹೆಚ್ಚುವರಿ ತೆರಿಗೆ ವಿಸುತ್ತಿರುವುದು ಕಂಡು ಬಂದಿದೆ. ಇಂದಿನ ದಿನಗಳಲ್ಲಿ ಈ ರೀತಿಯ ನಡವಳಿಕೆಗಳನ್ನು ಪುನರಾವರ್ತಿಸಬಾರೆಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

3 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

6 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

7 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

7 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

7 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

7 hours ago