ರಾಷ್ಟ್ರೀಯ

ಭಾರತದಲ್ಲಿ ಚಿರತೆಗಳ ಸ್ಥಿತಿ 2022: ರಾಜ್ಯದಲ್ಲಿ ಭಾರಿ ಏರಿಕೆ ಕಂಡ ಚಿರತೆ ಸಂಖ್ಯೆ

ಬೆಂಗಳೂರು: ಕರ್ನಾಟಕದ ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ- ಅಂಶಿ ಮತ್ತು ಬಿಆರ್‌ಟಿಯ ಐದು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕನಿಷ್ಠ 1,879 ಚಿರತೆಗಳು ಮುಕ್ತವಾಗಿ ಸಂಚರಿಸುತ್ತಿವೆ ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ‘ಭಾರತದಲ್ಲಿ ಚಿರತೆಗಳ ಸ್ಥಿತಿ 2022’ ವರದಿ ಅಂಕಿಅಂಶವನ್ನು ಕೇಂದ್ರ ಸಚಿವ ಭೂಪೇಂದರ್ ಯಾದವ್ ಗುರುವಾರ ಬಿಡುಗಡೆ ಮಾಡಿದರು.

ವರದಿಯ ಪ್ರಕಾರ, ಅರಣ್ಯ ಪ್ರದೇಶಗಳಲ್ಲಿ ಮಚ್ಚೆಯುಳ್ಳ ಚಿರತೆಗಳ ಸಂಖ್ಯೆ ಏರಿಕೆ ಕಂಡಿದೆ. ಇದು ಕರ್ನಾಟಕದಲ್ಲಿ ಮಾತ್ರವಲ್ಲ, ಬೇರೆ ರಾಜ್ಯಗಳಲ್ಲೂ ಏರಿಕೆ ಕಂಡಿದೆ ಎಂದು ವರದಿ ಹೇಳಿದೆ.

2018ರಲ್ಲಿ ಕರ್ನಾಟಕದಲ್ಲಿ 1,783 ಚಿರತೆಗಳನ್ನು ಗುರುತಿಸಲಾಗಿತ್ತು. ಈಗ ಚಿರತೆಗಳ ಸಂಖ್ಯೆ 96 ಹೆಚ್ಚಾಗಿವೆ. ಪಶ್ಚಿಮ ಘಟ್ಟಗಳಲ್ಲಿ 2022 ರಲ್ಲಿ 3,596 ಚಿರತೆಗಳಿದ್ದು, 2018 ರಲ್ಲಿ 3,387 ಏರಿಕೆ ಕಂಡಿದೆ ಎಂದು ವರದಿ ಹೇಳಿದೆ.

ಒಟ್ಟಾರೆಯಾಗಿ ಭಾರತದಲ್ಲಿ 13,874 ಚಿರತೆಗಳಿವೆ. ಇದು 2018 ರಲ್ಲಿ 12,852 ಚಿರತೆಗಳಿರುವುದಾಗಿ ಹೇಳಿತ್ತು.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಯ ಸಂಶೋಧಕರು ಭಾರತದಲ್ಲಿನ 20 ರಾಜ್ಯಗಳಲ್ಲಿನ ಚಿರತೆಗಳ ಗಣತಿಯನ್ನು 6.41 ಲಕ್ಷ ಕಿಮೀ ವ್ಯಾಪ್ತಿಯಲ್ಲಿ ಸಮೀಕ್ಷೆಗಾಗಿ ಅಧ್ಯಯನ ನಡೆಸಿದ್ದಾರೆ.

ವರದಿ ಪ್ರಕಾರ, ʼಪಶ್ಚಿಮ ಘಟ್ಟಗಳಲ್ಲಿ ಚಿರತೆ ಸಂಖ್ಯೆಯು ಏರಿಕೆ ಕಂಡಿದ್ದರು, ಇದು ಆವಾಸಸ್ಥಾನದ ನಷ್ಟ, ವಿಘಟನೆ ಮತ್ತು ಬೇಟೆಯಾಡುವಿಕೆಯ ಪರಿಣಾಮಗಳನ್ನು ಎದುರಿಸುತ್ತಿದೆʼ ಎಂದು ಹೇಳಿದೆ.

ಮಧ್ಯ ಮತ್ತು ಉತ್ತರದ ಪಶ್ಚಿಮ ಘಟ್ಟಗಳಲ್ಲಿ, ಹುಲಿ ಸಂರಕ್ಷಿತ ಪ್ರದೇಶಗಳ (ಭದ್ರಾ, ಕಾಳಿ, ಮುದುಮಲೈ ಮತ್ತು ಸತ್ಯಮಂಗಲಂ) ಚಿರತೆಗಳ ಸಂಖ್ಯೆಯು ಹೆಚ್ಚಿನ ಸಂಖ್ಯೆಯಲ್ಲಿವೆ.

ಕರ್ನಾಟಕದ ವನ್ಯಜೀವಿಗಳ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಲ್ಖಾಡೆ, ಮೀಸಲು ಪ್ರದೇಶದಲ್ಲಿನ ಕ್ಯಾಮೆರಾ ಟ್ರ್ಯಾಪ್ ಚಿತ್ರಗಳನ್ನು ಆಧರಿಸಿ ವರದಿಯಲ್ಲಿ ಚಿರತೆಗಳ ಸಂಖ್ಯೆಯನ್ನು ಪರಿಗಣಿಸಲಾಗಿದೆ ಎಂದು ವಿವರಿಸಿದರು.

ಕೇಂದ್ರ ಸಚಿವ ಭೂಪೇಂದರ್ ಯಾದವ್ ಪೋಸ್ಟ್‌: ಗುರುವಾರ ಚಿರತೆ ಗಣತಿಯ ಮಾಹಿತಿಯನ್ನು ಬಿಡುಗಡೆ ಗೊಳಸಿದ ಕೇಂದ್ರ ಸಚಿವ ಭೂಪೇಂದರ್ ಯಾದವ್ ಈ ಕುರಿತು ತಮ್ಮ ಎಕ್ಸ್‌ ವಾಹಿನಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಕುರಿತ ವರದಿ ಬಿಡುಗಡೆ ಮಾಡಲಾಗಿದೆ. ಭಾರತದಲ್ಲಿ ಚಿರತೆ ಆಕ್ರಮಿತ ಪ್ರದೇಶದ 70% ರಷ್ಟು ಅಂದಾಜು ಚಿರತೆಗಳು ಕಂಡು ಬಂದಿದೆ. 2018 ರಲ್ಲಿ 12,852 ಚಿರತೆಗಳಿದ್ದು, ಈಗ 13,874 ಏರಿಕೆ ಕಂಡಿದೆ ಎಂದು ಹಂಚಿಕೊಳ್ಳಲು ಸಂತೋಷವಾಗಿದೆ. ಮಧ್ಯಪ್ರದೇಶವು 3,907 ಚಿರತೆಗಳನ್ನು ಹೊಂದಿದ್ದು, ಅತೀಹೆಚ್ಚು ಚಿರತೆಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ, ಈ ಸಂರಕ್ಷಣಾ ಪ್ರಯಾಣವು ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯದ ತತ್ವಗಳನ್ನು ಒಳಗೊಂಡಿದೆ. ಈ ನಿರ್ಣಾಯಕ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಕೊಡುಗೆದಾರರಿಗೆ ಅಭಿನಂದನೆಗಳು ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

andolana

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

5 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

5 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

5 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

6 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

6 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

6 hours ago