ರಾಷ್ಟ್ರೀಯ

ಭಾರತದಲ್ಲಿ ಚಿರತೆಗಳ ಸ್ಥಿತಿ 2022: ರಾಜ್ಯದಲ್ಲಿ ಭಾರಿ ಏರಿಕೆ ಕಂಡ ಚಿರತೆ ಸಂಖ್ಯೆ

ಬೆಂಗಳೂರು: ಕರ್ನಾಟಕದ ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ- ಅಂಶಿ ಮತ್ತು ಬಿಆರ್‌ಟಿಯ ಐದು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕನಿಷ್ಠ 1,879 ಚಿರತೆಗಳು ಮುಕ್ತವಾಗಿ ಸಂಚರಿಸುತ್ತಿವೆ ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ‘ಭಾರತದಲ್ಲಿ ಚಿರತೆಗಳ ಸ್ಥಿತಿ 2022’ ವರದಿ ಅಂಕಿಅಂಶವನ್ನು ಕೇಂದ್ರ ಸಚಿವ ಭೂಪೇಂದರ್ ಯಾದವ್ ಗುರುವಾರ ಬಿಡುಗಡೆ ಮಾಡಿದರು.

ವರದಿಯ ಪ್ರಕಾರ, ಅರಣ್ಯ ಪ್ರದೇಶಗಳಲ್ಲಿ ಮಚ್ಚೆಯುಳ್ಳ ಚಿರತೆಗಳ ಸಂಖ್ಯೆ ಏರಿಕೆ ಕಂಡಿದೆ. ಇದು ಕರ್ನಾಟಕದಲ್ಲಿ ಮಾತ್ರವಲ್ಲ, ಬೇರೆ ರಾಜ್ಯಗಳಲ್ಲೂ ಏರಿಕೆ ಕಂಡಿದೆ ಎಂದು ವರದಿ ಹೇಳಿದೆ.

2018ರಲ್ಲಿ ಕರ್ನಾಟಕದಲ್ಲಿ 1,783 ಚಿರತೆಗಳನ್ನು ಗುರುತಿಸಲಾಗಿತ್ತು. ಈಗ ಚಿರತೆಗಳ ಸಂಖ್ಯೆ 96 ಹೆಚ್ಚಾಗಿವೆ. ಪಶ್ಚಿಮ ಘಟ್ಟಗಳಲ್ಲಿ 2022 ರಲ್ಲಿ 3,596 ಚಿರತೆಗಳಿದ್ದು, 2018 ರಲ್ಲಿ 3,387 ಏರಿಕೆ ಕಂಡಿದೆ ಎಂದು ವರದಿ ಹೇಳಿದೆ.

ಒಟ್ಟಾರೆಯಾಗಿ ಭಾರತದಲ್ಲಿ 13,874 ಚಿರತೆಗಳಿವೆ. ಇದು 2018 ರಲ್ಲಿ 12,852 ಚಿರತೆಗಳಿರುವುದಾಗಿ ಹೇಳಿತ್ತು.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಯ ಸಂಶೋಧಕರು ಭಾರತದಲ್ಲಿನ 20 ರಾಜ್ಯಗಳಲ್ಲಿನ ಚಿರತೆಗಳ ಗಣತಿಯನ್ನು 6.41 ಲಕ್ಷ ಕಿಮೀ ವ್ಯಾಪ್ತಿಯಲ್ಲಿ ಸಮೀಕ್ಷೆಗಾಗಿ ಅಧ್ಯಯನ ನಡೆಸಿದ್ದಾರೆ.

ವರದಿ ಪ್ರಕಾರ, ʼಪಶ್ಚಿಮ ಘಟ್ಟಗಳಲ್ಲಿ ಚಿರತೆ ಸಂಖ್ಯೆಯು ಏರಿಕೆ ಕಂಡಿದ್ದರು, ಇದು ಆವಾಸಸ್ಥಾನದ ನಷ್ಟ, ವಿಘಟನೆ ಮತ್ತು ಬೇಟೆಯಾಡುವಿಕೆಯ ಪರಿಣಾಮಗಳನ್ನು ಎದುರಿಸುತ್ತಿದೆʼ ಎಂದು ಹೇಳಿದೆ.

ಮಧ್ಯ ಮತ್ತು ಉತ್ತರದ ಪಶ್ಚಿಮ ಘಟ್ಟಗಳಲ್ಲಿ, ಹುಲಿ ಸಂರಕ್ಷಿತ ಪ್ರದೇಶಗಳ (ಭದ್ರಾ, ಕಾಳಿ, ಮುದುಮಲೈ ಮತ್ತು ಸತ್ಯಮಂಗಲಂ) ಚಿರತೆಗಳ ಸಂಖ್ಯೆಯು ಹೆಚ್ಚಿನ ಸಂಖ್ಯೆಯಲ್ಲಿವೆ.

ಕರ್ನಾಟಕದ ವನ್ಯಜೀವಿಗಳ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಲ್ಖಾಡೆ, ಮೀಸಲು ಪ್ರದೇಶದಲ್ಲಿನ ಕ್ಯಾಮೆರಾ ಟ್ರ್ಯಾಪ್ ಚಿತ್ರಗಳನ್ನು ಆಧರಿಸಿ ವರದಿಯಲ್ಲಿ ಚಿರತೆಗಳ ಸಂಖ್ಯೆಯನ್ನು ಪರಿಗಣಿಸಲಾಗಿದೆ ಎಂದು ವಿವರಿಸಿದರು.

ಕೇಂದ್ರ ಸಚಿವ ಭೂಪೇಂದರ್ ಯಾದವ್ ಪೋಸ್ಟ್‌: ಗುರುವಾರ ಚಿರತೆ ಗಣತಿಯ ಮಾಹಿತಿಯನ್ನು ಬಿಡುಗಡೆ ಗೊಳಸಿದ ಕೇಂದ್ರ ಸಚಿವ ಭೂಪೇಂದರ್ ಯಾದವ್ ಈ ಕುರಿತು ತಮ್ಮ ಎಕ್ಸ್‌ ವಾಹಿನಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಕುರಿತ ವರದಿ ಬಿಡುಗಡೆ ಮಾಡಲಾಗಿದೆ. ಭಾರತದಲ್ಲಿ ಚಿರತೆ ಆಕ್ರಮಿತ ಪ್ರದೇಶದ 70% ರಷ್ಟು ಅಂದಾಜು ಚಿರತೆಗಳು ಕಂಡು ಬಂದಿದೆ. 2018 ರಲ್ಲಿ 12,852 ಚಿರತೆಗಳಿದ್ದು, ಈಗ 13,874 ಏರಿಕೆ ಕಂಡಿದೆ ಎಂದು ಹಂಚಿಕೊಳ್ಳಲು ಸಂತೋಷವಾಗಿದೆ. ಮಧ್ಯಪ್ರದೇಶವು 3,907 ಚಿರತೆಗಳನ್ನು ಹೊಂದಿದ್ದು, ಅತೀಹೆಚ್ಚು ಚಿರತೆಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ, ಈ ಸಂರಕ್ಷಣಾ ಪ್ರಯಾಣವು ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯದ ತತ್ವಗಳನ್ನು ಒಳಗೊಂಡಿದೆ. ಈ ನಿರ್ಣಾಯಕ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಕೊಡುಗೆದಾರರಿಗೆ ಅಭಿನಂದನೆಗಳು ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

andolana

Recent Posts

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಕೆ.ಆರ್.ಪುರಂ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್‌ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಬಿಕ್ಲು…

2 mins ago

ಕೆನಡಾದಲ್ಲಿ ಕನ್ನಡಿಗ ಚಂದನ್‌ ಕುಮಾರ್‌ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪರಮೇಶ್ವರ್‌

ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್‌…

34 mins ago

ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಸುನೇತ್ರಾ ಪವಾರ್‌ ಅಧಿಕಾರ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಪವಾರ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಜಿತ್‌ ಪವಾರ್‌…

49 mins ago

ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ…

52 mins ago

ಬೇಸಿಗೆಗೂ ಮುನ್ನ ಕುಡಿಯುವ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.…

57 mins ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರಕರಣವೊಂದರ ಆರೋಪಿ ಸೆರೆ

ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ…

1 hour ago