ರಾಷ್ಟ್ರೀಯ

ಡಿ.ಕೆ ಶಿವಕುಮಾರ್ ಹೂಡಿಕೆ ವಿವರ ಸಲ್ಲಿಸಿ: ಜೈಹಿಂದ್ ಚಾನೆಲ್‌ಗೆ ಸಿಬಿಐ ನೊಟೀಸ್!

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ನೋಟಿಸ್ ಜಾರಿಮಾಡಿದೆ.

ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಯ ಬೆಂಗಳೂರು ಘಟಕವು ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ 2024 ರ ಜನವರಿ 11ರಂದು ತನಿಖಾಧಿಕಾರಿ ಕೋರಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನಿಖೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ.

ಸಿಆರ್‌ಪಿಸಿಯ ಸೆಕ್ಷನ್ 91 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‌ನಲ್ಲಿ, ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವರ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಚಾನಲ್‌ಗೆ ಕೇಳಿದೆ.

ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲಾ ಷೇರು ವಹಿವಾಟುಗಳ ವಿವರಗಳನ್ನು ಕೇಳಿದೆ.

ಜೈಹಿಂದ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್ ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ, ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ ಮತ್ತು ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು, ಈ ಪ್ರಕರಣವನ್ನು ಮತ್ತೆ ಕೆದಕಿರುವುದು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ಡಿಕೆ ಶಿವಕುಮಾರ್ ಅವರಿಗೆ ಕಿರುಕುಳ ಮಾಡುವ ಪ್ರಯತ್ನವಾಗಿದೆ ಎಂದು ಹೇಳಿದರು.

ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿದ್ದು, 2013 ಮತ್ತು 2018 ರ ನಡುವೆ ಅವರು 74 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಿದ್ದರು, ಅದು ಅವರ ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಲಾಗಿದೆ.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

6 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

14 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago