ರಾಷ್ಟ್ರೀಯ

ಡಿ.ಕೆ ಶಿವಕುಮಾರ್ ಹೂಡಿಕೆ ವಿವರ ಸಲ್ಲಿಸಿ: ಜೈಹಿಂದ್ ಚಾನೆಲ್‌ಗೆ ಸಿಬಿಐ ನೊಟೀಸ್!

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ನೋಟಿಸ್ ಜಾರಿಮಾಡಿದೆ.

ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಯ ಬೆಂಗಳೂರು ಘಟಕವು ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ 2024 ರ ಜನವರಿ 11ರಂದು ತನಿಖಾಧಿಕಾರಿ ಕೋರಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನಿಖೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ.

ಸಿಆರ್‌ಪಿಸಿಯ ಸೆಕ್ಷನ್ 91 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‌ನಲ್ಲಿ, ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವರ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಚಾನಲ್‌ಗೆ ಕೇಳಿದೆ.

ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲಾ ಷೇರು ವಹಿವಾಟುಗಳ ವಿವರಗಳನ್ನು ಕೇಳಿದೆ.

ಜೈಹಿಂದ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್ ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ, ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ ಮತ್ತು ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದ್ದಾರೆ.

ಪಿಟಿಐ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು, ಈ ಪ್ರಕರಣವನ್ನು ಮತ್ತೆ ಕೆದಕಿರುವುದು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ಡಿಕೆ ಶಿವಕುಮಾರ್ ಅವರಿಗೆ ಕಿರುಕುಳ ಮಾಡುವ ಪ್ರಯತ್ನವಾಗಿದೆ ಎಂದು ಹೇಳಿದರು.

ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿದ್ದು, 2013 ಮತ್ತು 2018 ರ ನಡುವೆ ಅವರು 74 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಿದ್ದರು, ಅದು ಅವರ ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಲಾಗಿದೆ.

andolanait

Recent Posts

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

1 hour ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

7 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago