ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ನೋಟಿಸ್ ಜಾರಿಮಾಡಿದೆ.
ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಯ ಬೆಂಗಳೂರು ಘಟಕವು ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಿಗೆ 2024 ರ ಜನವರಿ 11ರಂದು ತನಿಖಾಧಿಕಾರಿ ಕೋರಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನಿಖೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ.
ಸಿಆರ್ಪಿಸಿಯ ಸೆಕ್ಷನ್ 91 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್ನಲ್ಲಿ, ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವರ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಚಾನಲ್ಗೆ ಕೇಳಿದೆ.
ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲಾ ಷೇರು ವಹಿವಾಟುಗಳ ವಿವರಗಳನ್ನು ಕೇಳಿದೆ.
ಜೈಹಿಂದ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್ ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ, ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ ಮತ್ತು ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು, ಈ ಪ್ರಕರಣವನ್ನು ಮತ್ತೆ ಕೆದಕಿರುವುದು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ಡಿಕೆ ಶಿವಕುಮಾರ್ ಅವರಿಗೆ ಕಿರುಕುಳ ಮಾಡುವ ಪ್ರಯತ್ನವಾಗಿದೆ ಎಂದು ಹೇಳಿದರು.
ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿದ್ದು, 2013 ಮತ್ತು 2018 ರ ನಡುವೆ ಅವರು 74 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಿದ್ದರು, ಅದು ಅವರ ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಲಾಗಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…