ರಾಷ್ಟ್ರೀಯ

ಎಂಪಿ, ಎಂಎಎಲ್‍ಎಗಳ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಸೂಚನೆ

ನವದೆಹಲಿ : ಸಂಸದರು ಮತ್ತು ಶಾಸಕರ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ವಿಶೇಷ ಪೀಠ ರಚನೆ ಮಾಡುವಂತೆ ಹಾಗೂ ಪೀಠದ ನೇತೃತ್ವವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಹಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಲೇವಾರಿಗಾಗಿ ನಿರ್ದೇಶನ ನೀಡಬೇಕು. ಆರು ವರ್ಷಗಳ ನಿಷೇಧಕ್ಕೆ ವಿರುದ್ಧವಾಗಿ ಹಾಲಿ ಶಾಸಕರು ಸೇರಿದಂತೆ ಅಪರಾಧಿ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಜೀವಮಾನದ ನಿಷೇಧವನ್ನು ಹೇರುವಂತೆ ವಕೀಲ ಹಾಗೂ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ನೇತೃತ್ವದ ಪೀಠ ವಿಚಾರಣೆ ನಡೆಸಿತು.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠವು ಮುಖ್ಯವಾಗಿ ಸಂಸದರು ಅಥವಾ ಶಾಸಕರ ವಿರುದ್ಧ ಮರಣದಂಡನೆ ವಿಧಿಸಬಹುದಾದ ಪ್ರಕರಣಗಳಿಗೆ ಇತರ ಪ್ರಕರಣಗಳಿಗಿಂತ ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ಪ್ರಕರಣಗಳ ತ್ವರಿತ ವಿಲೇವಾರಿ ಮಾಡುವಂತೆ ಕೋರ್ಟ್ ನಿರ್ದೇಶಿಸಿದೆ. ಸಂಬಂಧಪಟ್ಟ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ಅಂತಹ ಪ್ರಕರಣಗಳ ವಿಚಾರಣೆಗೆ ಸಾಕಷ್ಟು ಮೂಲಸೌಕರ್ಯ ಸೌಲಭ್ಯಗಳು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಹೇಳಿದೆ.

ಉಪಾಧ್ಯಾಯ ಅವರು ಕಳೆದ ಏಪ್ರಿಲ್‍ನಲ್ಲಿ ಗಂಭೀರ ಅಪರಾಧಗಳಿಗಾಗಿ ಚಾರ್ಜ್‍ಶೀಟ್ ಮಾಡಿದ ವ್ಯಕ್ತಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಮನವಿ ಮಾಡಿದ್ದರು. ಇದು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಟೀಕಿಸಿತ್ತು.

 

lokesh

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

7 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

7 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

9 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

9 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

9 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

11 hours ago