ರಾಷ್ಟ್ರೀಯ

ಎಂಪಿ, ಎಂಎಎಲ್‍ಎಗಳ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಸೂಚನೆ

ನವದೆಹಲಿ : ಸಂಸದರು ಮತ್ತು ಶಾಸಕರ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ವಿಶೇಷ ಪೀಠ ರಚನೆ ಮಾಡುವಂತೆ ಹಾಗೂ ಪೀಠದ ನೇತೃತ್ವವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಹಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಲೇವಾರಿಗಾಗಿ ನಿರ್ದೇಶನ ನೀಡಬೇಕು. ಆರು ವರ್ಷಗಳ ನಿಷೇಧಕ್ಕೆ ವಿರುದ್ಧವಾಗಿ ಹಾಲಿ ಶಾಸಕರು ಸೇರಿದಂತೆ ಅಪರಾಧಿ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಜೀವಮಾನದ ನಿಷೇಧವನ್ನು ಹೇರುವಂತೆ ವಕೀಲ ಹಾಗೂ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ನೇತೃತ್ವದ ಪೀಠ ವಿಚಾರಣೆ ನಡೆಸಿತು.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠವು ಮುಖ್ಯವಾಗಿ ಸಂಸದರು ಅಥವಾ ಶಾಸಕರ ವಿರುದ್ಧ ಮರಣದಂಡನೆ ವಿಧಿಸಬಹುದಾದ ಪ್ರಕರಣಗಳಿಗೆ ಇತರ ಪ್ರಕರಣಗಳಿಗಿಂತ ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ಪ್ರಕರಣಗಳ ತ್ವರಿತ ವಿಲೇವಾರಿ ಮಾಡುವಂತೆ ಕೋರ್ಟ್ ನಿರ್ದೇಶಿಸಿದೆ. ಸಂಬಂಧಪಟ್ಟ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ಅಂತಹ ಪ್ರಕರಣಗಳ ವಿಚಾರಣೆಗೆ ಸಾಕಷ್ಟು ಮೂಲಸೌಕರ್ಯ ಸೌಲಭ್ಯಗಳು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಹೇಳಿದೆ.

ಉಪಾಧ್ಯಾಯ ಅವರು ಕಳೆದ ಏಪ್ರಿಲ್‍ನಲ್ಲಿ ಗಂಭೀರ ಅಪರಾಧಗಳಿಗಾಗಿ ಚಾರ್ಜ್‍ಶೀಟ್ ಮಾಡಿದ ವ್ಯಕ್ತಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಮನವಿ ಮಾಡಿದ್ದರು. ಇದು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಟೀಕಿಸಿತ್ತು.

 

lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago