ರಾಷ್ಟ್ರೀಯ

ಪಾಕಿಸ್ತಾನದಿಂದ ‘ಮಿಡತೆಗಳ ದಂಡು’ ಬರುವಂತೆ ‘ಈಡಿ ದಂಡು’ ಬಂದಿದೆ: ಸಿಎಂ ಗೆಹ್ಲೋಟ್

ಜೈಪುರ : ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವಂತೆಯೇ, ಅನುಷ್ಠಾನ ನಿರ್ದೇಶನಾಲಯವು ಶುಕ್ರವಾರ ರಾಜ್ಯದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಲಜೀವನ್ ಮಿಶನ್ ಯೋಜನೆಯಲ್ಲಿ ನಡೆದಿದೆಯೆನ್ನಲಾಗಿರುವ ಅವ್ಯವಹಾರಗಳ ಬಗ್ಗೆ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ದಾಳಿಗಳು ನಡೆದಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜ್ಯದ ರಾಜಧಾನಿ ಜೈಪುರ ಮತ್ತು ದೌಸ ನಗರದ 25 ಸ್ಥಳಗಳಲ್ಲಿ ದಾಳಿಗಳನ್ನು ನಡೆಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಮ್‌ಎಲ್‌ಎ)ಯ ವಿಧಿಗಳನ್ವಯ ಕೆಲವು ವ್ಯಕ್ತಿಗಳಿಗೆ ಸೇರಿರುವ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅಧಿಕೃತಿ ಮೂಲಗಳು ಹೇಳಿವೆ.

ಅದೇ ವೇಳೆ, ಅನುಷ್ಠಾನ ನಿರ್ದೇಶನಾಲಯದ ದಾಳಿಗಳಿಗೆ ಪ್ರತಿಕ್ರಿಯಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಬಿಜೆಪಿಯ ಆದೇಶದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳು ಪ್ರತಿಪಕ್ಷಗಳ ಮೇಲೆ ಮುಗಿಬಿದ್ದಿವೆ ಎಂದು ಆರೋಪಿಸಿದ್ದಾರೆ. ‘‘ದೇಶದಲ್ಲಿ ಅನುಷ್ಠಾನ ನಿರ್ದೇಶನಾಲಯದ ದಾಳಿಗಳು ನಡೆಯುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಪಾಕಿಸ್ತಾನದಿಂದ ಮಿಡತೆಗಳ ದಂಡು ಹೇಗೆ ಬರುತ್ತವೆಯೋ, ಹಾಗೆಯೇ ‘ಈಡಿ ದಂಡು’ ಇಂದು ಬರುತ್ತಿದೆ’’ ಎಂದು ಅವರು ಎಎನ್‌ಐ ಜೊತೆ ಮಾತನಾಡುತ್ತಾ ಹೇಳಿದರು.

ಸಿಬಿಐ, ಈಡಿ ಮತ್ತು ಆದಾಯ ತೆರಿಗೆ ಇಲಾಖೆ ಮುಂತಾದ ಸಂಸ್ಥೆಗಳ ವಿಶ್ವಾಸಾರ್ಹತೆ ಕುಸಿಯುತ್ತಿದೆ ಎಂದು ಅವರು ಹೇಳಿದರು. ‘‘ಇಂಥ ದಾಳಿಗಳನ್ನು ಅವರು ಹಾಸ್ಯವಾಗಿಸಿದ್ದಾರೆ. ಸಿಬಿಐ, ಈಡಿ ಮತ್ತು ಆದಾಯ ತೆರಿಗೆ ಇಲಾಖೆ ಮುಂತಾದ ಸಂಸ್ಥೆಗಳ ಸಾಮರ್ಥ್ಯವು ಕುಸಿಯುತ್ತಿದೆ ಎಂದು ಹೇಳುವ ಲೇಖನವೊಂದನ್ನು ನಾನು ಇಂದು ಓದುತ್ತಿದ್ದೆ’’ ಎಂದು ರಾಜಸ್ಥಾನ ಮುಖ್ಯಮಂತ್ರಿ ಹೇಳಿದರು.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

12 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

12 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

13 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

14 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

14 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

14 hours ago