ಜೈಪುರ : ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವಂತೆಯೇ, ಅನುಷ್ಠಾನ ನಿರ್ದೇಶನಾಲಯವು ಶುಕ್ರವಾರ ರಾಜ್ಯದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಲಜೀವನ್ ಮಿಶನ್ ಯೋಜನೆಯಲ್ಲಿ ನಡೆದಿದೆಯೆನ್ನಲಾಗಿರುವ ಅವ್ಯವಹಾರಗಳ ಬಗ್ಗೆ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ದಾಳಿಗಳು ನಡೆದಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಜ್ಯದ ರಾಜಧಾನಿ ಜೈಪುರ ಮತ್ತು ದೌಸ ನಗರದ 25 ಸ್ಥಳಗಳಲ್ಲಿ ದಾಳಿಗಳನ್ನು ನಡೆಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಮ್ಎಲ್ಎ)ಯ ವಿಧಿಗಳನ್ವಯ ಕೆಲವು ವ್ಯಕ್ತಿಗಳಿಗೆ ಸೇರಿರುವ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅಧಿಕೃತಿ ಮೂಲಗಳು ಹೇಳಿವೆ.
ಅದೇ ವೇಳೆ, ಅನುಷ್ಠಾನ ನಿರ್ದೇಶನಾಲಯದ ದಾಳಿಗಳಿಗೆ ಪ್ರತಿಕ್ರಿಯಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಬಿಜೆಪಿಯ ಆದೇಶದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳು ಪ್ರತಿಪಕ್ಷಗಳ ಮೇಲೆ ಮುಗಿಬಿದ್ದಿವೆ ಎಂದು ಆರೋಪಿಸಿದ್ದಾರೆ. ‘‘ದೇಶದಲ್ಲಿ ಅನುಷ್ಠಾನ ನಿರ್ದೇಶನಾಲಯದ ದಾಳಿಗಳು ನಡೆಯುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಪಾಕಿಸ್ತಾನದಿಂದ ಮಿಡತೆಗಳ ದಂಡು ಹೇಗೆ ಬರುತ್ತವೆಯೋ, ಹಾಗೆಯೇ ‘ಈಡಿ ದಂಡು’ ಇಂದು ಬರುತ್ತಿದೆ’’ ಎಂದು ಅವರು ಎಎನ್ಐ ಜೊತೆ ಮಾತನಾಡುತ್ತಾ ಹೇಳಿದರು.
ಸಿಬಿಐ, ಈಡಿ ಮತ್ತು ಆದಾಯ ತೆರಿಗೆ ಇಲಾಖೆ ಮುಂತಾದ ಸಂಸ್ಥೆಗಳ ವಿಶ್ವಾಸಾರ್ಹತೆ ಕುಸಿಯುತ್ತಿದೆ ಎಂದು ಅವರು ಹೇಳಿದರು. ‘‘ಇಂಥ ದಾಳಿಗಳನ್ನು ಅವರು ಹಾಸ್ಯವಾಗಿಸಿದ್ದಾರೆ. ಸಿಬಿಐ, ಈಡಿ ಮತ್ತು ಆದಾಯ ತೆರಿಗೆ ಇಲಾಖೆ ಮುಂತಾದ ಸಂಸ್ಥೆಗಳ ಸಾಮರ್ಥ್ಯವು ಕುಸಿಯುತ್ತಿದೆ ಎಂದು ಹೇಳುವ ಲೇಖನವೊಂದನ್ನು ನಾನು ಇಂದು ಓದುತ್ತಿದ್ದೆ’’ ಎಂದು ರಾಜಸ್ಥಾನ ಮುಖ್ಯಮಂತ್ರಿ ಹೇಳಿದರು.
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…