ರಾಷ್ಟ್ರೀಯ

ಟಿ೨೦ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆ!

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿದೆ.

2024ರ ಐಸಿಸಿ ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಜೂನ್ 1ರಂದು ಸಹ-ಆತಿಥೇಯ ಯುಎಸ್‌ಎ ತಂಡವು ಕೆನಡಾ ತಂಡವನ್ನು ಎದುರಿಸುವುದರೊಂದಿಗೆ ಚಾಲನೆ ಸಿಗಲಿದೆ.

ಇನ್ನು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ  ತಂಡಗಳ ನಡುವಿನ ಬಹು ನಿರೀಕ್ಷಿತ ಪಂದ್ಯವು ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

2024ರ ಟಿ20 ವಿಶ್ವಕಪ್ ಗುಂಪು ಹಂತಗಳಲ್ಲಿ ಭಾರತ ತಂಡದ ವೇಳಾಪಟ್ಟಿ

  • ಜೂನ್ 5: ಭಾರತ vs ಐರ್ಲೆಂಡ್ (ನ್ಯೂಯಾರ್ಕ್)
  • ಜೂನ್ 9: ಭಾರತ vs ಪಾಕಿಸ್ತಾನ (ನ್ಯೂಯಾರ್ಕ್)
  • ಜೂನ್ 12: ಭಾರತ vs ಯುಎಸ್‌ಎ (ನ್ಯೂಯಾರ್ಕ್)
  • ಜೂನ್ 15: ಭಾರತ vs ಕೆನಡಾ (ಫ್ಲೋರಿಡಾ)

ಇನ್ನು ಭಾರತ ತಂಡವು 2024ರ ಟಿ20 ವಿಶ್ವಕಪ್ ಸಮಯದಲ್ಲಿ ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ಆರಂಭಿಕ ಪಂದ್ಯದಲ್ಲಿ ಐರ್ಲೆಂಡ್‌ ತಂಡದ ವಿರುದ್ಧ ಸೆಣಸಾಡಲಿದೆ.

ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲು ಬಯಸಿರುವ ಟೀಮ್ ಇಂಡಿಯಾ ತಮ್ಮ ಗುಂಪು ಪಂದ್ಯಗಳನ್ನು ಯುಎಸ್‌ಎನಲ್ಲಿ ಆಡಲಿದೆ. ಸೂಪರ್ 8 ಪಂದ್ಯಗಳನ್ನು ಅರ್ಹತೆ ಪಡೆದರೆ ವೆಸ್ಟ್ ಇಂಡೀಸ್‌ನಲ್ಲಿ ಆಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ತಂಡವು ತನ್ನ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲು ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ, ಭಾರತವು ಜೂನ್ 12ರಂದು ನ್ಯೂಯಾರ್ಕ್‌ನಲ್ಲಿ ಯುಎಸ್‌ಎ ತಂಡವನ್ನು ಎದುರಿಸಲಿದೆ ಮತ್ತು ಫ್ಲೋರಿಡಾದಲ್ಲಿ ತಮ್ಮ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಕೆನಡಾ ತಂಡದ ವಿರುದ್ಧ ಮುಖಾಮುಖಿಯಾಗಲಿದೆ.

2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಎರಡು ಸೆಮಿಫೈನಲ್ ಪಂದ್ಯಗಳು ಜೂನ್ 26 ಮತ್ತು 27ರಂದು ನಡೆಯಲಿದ್ದರೆ, ಜೂನ್ 29ರಂದು ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

andolanait

Recent Posts

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

15 mins ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

17 mins ago

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…

20 mins ago

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

3 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

3 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

3 hours ago