ರಾಷ್ಟ್ರೀಯ

ಟಿ೨೦ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆ!

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿದೆ.

2024ರ ಐಸಿಸಿ ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಜೂನ್ 1ರಂದು ಸಹ-ಆತಿಥೇಯ ಯುಎಸ್‌ಎ ತಂಡವು ಕೆನಡಾ ತಂಡವನ್ನು ಎದುರಿಸುವುದರೊಂದಿಗೆ ಚಾಲನೆ ಸಿಗಲಿದೆ.

ಇನ್ನು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ  ತಂಡಗಳ ನಡುವಿನ ಬಹು ನಿರೀಕ್ಷಿತ ಪಂದ್ಯವು ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

2024ರ ಟಿ20 ವಿಶ್ವಕಪ್ ಗುಂಪು ಹಂತಗಳಲ್ಲಿ ಭಾರತ ತಂಡದ ವೇಳಾಪಟ್ಟಿ

  • ಜೂನ್ 5: ಭಾರತ vs ಐರ್ಲೆಂಡ್ (ನ್ಯೂಯಾರ್ಕ್)
  • ಜೂನ್ 9: ಭಾರತ vs ಪಾಕಿಸ್ತಾನ (ನ್ಯೂಯಾರ್ಕ್)
  • ಜೂನ್ 12: ಭಾರತ vs ಯುಎಸ್‌ಎ (ನ್ಯೂಯಾರ್ಕ್)
  • ಜೂನ್ 15: ಭಾರತ vs ಕೆನಡಾ (ಫ್ಲೋರಿಡಾ)

ಇನ್ನು ಭಾರತ ತಂಡವು 2024ರ ಟಿ20 ವಿಶ್ವಕಪ್ ಸಮಯದಲ್ಲಿ ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ಆರಂಭಿಕ ಪಂದ್ಯದಲ್ಲಿ ಐರ್ಲೆಂಡ್‌ ತಂಡದ ವಿರುದ್ಧ ಸೆಣಸಾಡಲಿದೆ.

ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲು ಬಯಸಿರುವ ಟೀಮ್ ಇಂಡಿಯಾ ತಮ್ಮ ಗುಂಪು ಪಂದ್ಯಗಳನ್ನು ಯುಎಸ್‌ಎನಲ್ಲಿ ಆಡಲಿದೆ. ಸೂಪರ್ 8 ಪಂದ್ಯಗಳನ್ನು ಅರ್ಹತೆ ಪಡೆದರೆ ವೆಸ್ಟ್ ಇಂಡೀಸ್‌ನಲ್ಲಿ ಆಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ತಂಡವು ತನ್ನ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲು ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ, ಭಾರತವು ಜೂನ್ 12ರಂದು ನ್ಯೂಯಾರ್ಕ್‌ನಲ್ಲಿ ಯುಎಸ್‌ಎ ತಂಡವನ್ನು ಎದುರಿಸಲಿದೆ ಮತ್ತು ಫ್ಲೋರಿಡಾದಲ್ಲಿ ತಮ್ಮ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಕೆನಡಾ ತಂಡದ ವಿರುದ್ಧ ಮುಖಾಮುಖಿಯಾಗಲಿದೆ.

2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಎರಡು ಸೆಮಿಫೈನಲ್ ಪಂದ್ಯಗಳು ಜೂನ್ 26 ಮತ್ತು 27ರಂದು ನಡೆಯಲಿದ್ದರೆ, ಜೂನ್ 29ರಂದು ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

11 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

11 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

11 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

11 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

11 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

12 hours ago