ರಾಷ್ಟ್ರೀಯ

ಟಿ೨೦ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆ!

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿದೆ.

2024ರ ಐಸಿಸಿ ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಜೂನ್ 1ರಂದು ಸಹ-ಆತಿಥೇಯ ಯುಎಸ್‌ಎ ತಂಡವು ಕೆನಡಾ ತಂಡವನ್ನು ಎದುರಿಸುವುದರೊಂದಿಗೆ ಚಾಲನೆ ಸಿಗಲಿದೆ.

ಇನ್ನು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ  ತಂಡಗಳ ನಡುವಿನ ಬಹು ನಿರೀಕ್ಷಿತ ಪಂದ್ಯವು ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

2024ರ ಟಿ20 ವಿಶ್ವಕಪ್ ಗುಂಪು ಹಂತಗಳಲ್ಲಿ ಭಾರತ ತಂಡದ ವೇಳಾಪಟ್ಟಿ

  • ಜೂನ್ 5: ಭಾರತ vs ಐರ್ಲೆಂಡ್ (ನ್ಯೂಯಾರ್ಕ್)
  • ಜೂನ್ 9: ಭಾರತ vs ಪಾಕಿಸ್ತಾನ (ನ್ಯೂಯಾರ್ಕ್)
  • ಜೂನ್ 12: ಭಾರತ vs ಯುಎಸ್‌ಎ (ನ್ಯೂಯಾರ್ಕ್)
  • ಜೂನ್ 15: ಭಾರತ vs ಕೆನಡಾ (ಫ್ಲೋರಿಡಾ)

ಇನ್ನು ಭಾರತ ತಂಡವು 2024ರ ಟಿ20 ವಿಶ್ವಕಪ್ ಸಮಯದಲ್ಲಿ ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ಆರಂಭಿಕ ಪಂದ್ಯದಲ್ಲಿ ಐರ್ಲೆಂಡ್‌ ತಂಡದ ವಿರುದ್ಧ ಸೆಣಸಾಡಲಿದೆ.

ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲು ಬಯಸಿರುವ ಟೀಮ್ ಇಂಡಿಯಾ ತಮ್ಮ ಗುಂಪು ಪಂದ್ಯಗಳನ್ನು ಯುಎಸ್‌ಎನಲ್ಲಿ ಆಡಲಿದೆ. ಸೂಪರ್ 8 ಪಂದ್ಯಗಳನ್ನು ಅರ್ಹತೆ ಪಡೆದರೆ ವೆಸ್ಟ್ ಇಂಡೀಸ್‌ನಲ್ಲಿ ಆಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ತಂಡವು ತನ್ನ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲು ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ, ಭಾರತವು ಜೂನ್ 12ರಂದು ನ್ಯೂಯಾರ್ಕ್‌ನಲ್ಲಿ ಯುಎಸ್‌ಎ ತಂಡವನ್ನು ಎದುರಿಸಲಿದೆ ಮತ್ತು ಫ್ಲೋರಿಡಾದಲ್ಲಿ ತಮ್ಮ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಕೆನಡಾ ತಂಡದ ವಿರುದ್ಧ ಮುಖಾಮುಖಿಯಾಗಲಿದೆ.

2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಎರಡು ಸೆಮಿಫೈನಲ್ ಪಂದ್ಯಗಳು ಜೂನ್ 26 ಮತ್ತು 27ರಂದು ನಡೆಯಲಿದ್ದರೆ, ಜೂನ್ 29ರಂದು ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

8 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

9 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

10 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

14 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

15 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

21 hours ago