ರಾಷ್ಟ್ರೀಯ

ಟಿ೨೦ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆ!

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿದೆ.

2024ರ ಐಸಿಸಿ ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಜೂನ್ 1ರಂದು ಸಹ-ಆತಿಥೇಯ ಯುಎಸ್‌ಎ ತಂಡವು ಕೆನಡಾ ತಂಡವನ್ನು ಎದುರಿಸುವುದರೊಂದಿಗೆ ಚಾಲನೆ ಸಿಗಲಿದೆ.

ಇನ್ನು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ  ತಂಡಗಳ ನಡುವಿನ ಬಹು ನಿರೀಕ್ಷಿತ ಪಂದ್ಯವು ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

2024ರ ಟಿ20 ವಿಶ್ವಕಪ್ ಗುಂಪು ಹಂತಗಳಲ್ಲಿ ಭಾರತ ತಂಡದ ವೇಳಾಪಟ್ಟಿ

  • ಜೂನ್ 5: ಭಾರತ vs ಐರ್ಲೆಂಡ್ (ನ್ಯೂಯಾರ್ಕ್)
  • ಜೂನ್ 9: ಭಾರತ vs ಪಾಕಿಸ್ತಾನ (ನ್ಯೂಯಾರ್ಕ್)
  • ಜೂನ್ 12: ಭಾರತ vs ಯುಎಸ್‌ಎ (ನ್ಯೂಯಾರ್ಕ್)
  • ಜೂನ್ 15: ಭಾರತ vs ಕೆನಡಾ (ಫ್ಲೋರಿಡಾ)

ಇನ್ನು ಭಾರತ ತಂಡವು 2024ರ ಟಿ20 ವಿಶ್ವಕಪ್ ಸಮಯದಲ್ಲಿ ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ಆರಂಭಿಕ ಪಂದ್ಯದಲ್ಲಿ ಐರ್ಲೆಂಡ್‌ ತಂಡದ ವಿರುದ್ಧ ಸೆಣಸಾಡಲಿದೆ.

ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲು ಬಯಸಿರುವ ಟೀಮ್ ಇಂಡಿಯಾ ತಮ್ಮ ಗುಂಪು ಪಂದ್ಯಗಳನ್ನು ಯುಎಸ್‌ಎನಲ್ಲಿ ಆಡಲಿದೆ. ಸೂಪರ್ 8 ಪಂದ್ಯಗಳನ್ನು ಅರ್ಹತೆ ಪಡೆದರೆ ವೆಸ್ಟ್ ಇಂಡೀಸ್‌ನಲ್ಲಿ ಆಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ತಂಡವು ತನ್ನ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲು ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ, ಭಾರತವು ಜೂನ್ 12ರಂದು ನ್ಯೂಯಾರ್ಕ್‌ನಲ್ಲಿ ಯುಎಸ್‌ಎ ತಂಡವನ್ನು ಎದುರಿಸಲಿದೆ ಮತ್ತು ಫ್ಲೋರಿಡಾದಲ್ಲಿ ತಮ್ಮ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಕೆನಡಾ ತಂಡದ ವಿರುದ್ಧ ಮುಖಾಮುಖಿಯಾಗಲಿದೆ.

2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಎರಡು ಸೆಮಿಫೈನಲ್ ಪಂದ್ಯಗಳು ಜೂನ್ 26 ಮತ್ತು 27ರಂದು ನಡೆಯಲಿದ್ದರೆ, ಜೂನ್ 29ರಂದು ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

9 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

9 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

10 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

11 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

16 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

16 hours ago