ರಾಷ್ಟ್ರೀಯ

ತಮಿಳುನಾಡು ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿ ಬಂಧನ

ಚೆನ್ನೈ : ಚೆನ್ನೈನಲ್ಲಿ ಅನಧಿಕೃತವಾಗಿ ಸ್ಥಾಪಿಸಲಾಗಿದ್ದ ಧ್ವಜ ಸ್ತಂಭವನ್ನು ತೆರವುಗೊಳಿಸಲು ತಂದಿದ್ದ ಜೆಸಿಬಿ ಮೆಷಿನ್ ಮೇಲೆ ದಾಳಿ ನಡೆಸಿ, ಅದಕ್ಕೆ ಹಾನಿ ಮಾಡಿರುವ ಆರೋಪದಲ್ಲಿ ತಮಿಳುನಾಡು ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿಯನ್ನು ಶನಿವಾರ ಬಂಧಿಸಲಾಗಿದೆ. ಅವರನ್ನು ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು indiatoday.in ವರದಿ ಮಾಡಿದೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ನಿವಾಸದೆದುರು ಸ್ಥಾಪಿಸಲಾಗಿರುವ ಧ್ವಜ ಸ್ತಂಭವನ್ನು ತೆರವುಗೊಳಿಸಲು ಅಧಿಕಾರಿಗಳು ಹಾಗೂ ಪೊಲೀಸರು ತೆರಳಿದ್ದರು.

ತಾಂಬರನ್ ಪೊಲೀಸರ ಪ್ರಕಾರ, ಶುಕ್ರವಾರ ಸಂಜೆ ಅಣ್ಣಾಮಲೈ ನಿವಾಸದೆದುರಿನ ದ್ವಾರದ ಮೇಲೆ 45 ಅಡಿ ಎತ್ತರದ ಧ‍್ವಜ ಸ್ತಂಭವನ್ನು ಸ್ಥಾಪಿಸಲು ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ಹೇಳಿದ್ದಾರೆ.

ಧ್ವಜ ಸ್ತಂಭವು ಭಾರಿ ವೋಲ್ಟೇಜ್ ಹೊಂದಿರುವ ವಿದ್ಯುತ್ ತಂತಿಗಳಿಗೆ ತೀರಾ ಹತ್ತಿರವಿತ್ತು ಹಾಗೂ ಸಾರ್ವಜನಿಕರಿಗೆ ಅನನುಕೂಲವನ್ನುಂಟು ಮಾಡುತ್ತಿತ್ತು ಎಂದಿರುವ ಪೊಲೀಸರು, ಧ್ವಜ ಸ್ತಂಭವನ್ನು ತೆರವುಗೊಳಿಸುವ ನಿರ್ಧಾರವನ್ನು ಮಹಾನಗರ ಪಾಲಿಕೆಯು ನಂತರ ಕೈಗೊಂಡಿದ್ದು, ಪೊಲೀಸರು ಅದನ್ನು ತೆರವುಗೊಳಿಸಬೇಕಿತ್ತು ಎಂದೂ ತಿಳಿಸಿದ್ದಾರೆ.

ಇದರ ಬೆನ್ನಿಗೇ ಅಮರ್ ಪ್ರಸಾದ್ ರೆಡ್ಡಿ ಬಂಧನವನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಖಂಡಿಸಿದ್ದಾರೆ.

ಧ್ವಜ ಸ್ತಂಭವನ್ನು ತೆರವುಗೊಳಿಸಲು ಅಧಿಕಾರಿಗಳು ಹಾಗೂ ಕೆಲಸಗಾರರು ಸ್ಥಳಕ್ಕೆ ಧಾವಿಸಿದಾಗ ಸುಮಾರು 110 ಮಂದಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು ಎಂದು ಪೊಲೀಸರು ಹೇಳಿದ್ದಾರೆ.

“ಪದೇ ಪದೇ ಮನವಿ ಮಾಡಿದ ಹೊರತಾಗಿಯೂ ಅವರು ಸರ್ಕಾರಿ ಅಧಿಕಾರಿಗಳೊಂದಿಗೆ ವಾದಿಸುವುದನ್ನು ಮುಂದುವರಿಸಿದರು. ಇದರ ಬೆನ್ನಿಗೇ, ಕೆಲವು ಪ್ರತಿಭಟನಾಕಾರರನ್ನು ಬಂಧಿಸಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮರ್ ಪ್ರಸಾದ್ ರೆಡ್ಡಿ ಹೊರತಾಗಿ ಇನ್ನಿತರ ಐದು ಮಂದಿಯ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

andolanait

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

3 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

4 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

4 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

4 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

5 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

5 hours ago