ರಾಷ್ಟ್ರೀಯ

ತಮಿಳುನಾಡು ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿ ಬಂಧನ

ಚೆನ್ನೈ : ಚೆನ್ನೈನಲ್ಲಿ ಅನಧಿಕೃತವಾಗಿ ಸ್ಥಾಪಿಸಲಾಗಿದ್ದ ಧ್ವಜ ಸ್ತಂಭವನ್ನು ತೆರವುಗೊಳಿಸಲು ತಂದಿದ್ದ ಜೆಸಿಬಿ ಮೆಷಿನ್ ಮೇಲೆ ದಾಳಿ ನಡೆಸಿ, ಅದಕ್ಕೆ ಹಾನಿ ಮಾಡಿರುವ ಆರೋಪದಲ್ಲಿ ತಮಿಳುನಾಡು ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿಯನ್ನು ಶನಿವಾರ ಬಂಧಿಸಲಾಗಿದೆ. ಅವರನ್ನು ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು indiatoday.in ವರದಿ ಮಾಡಿದೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ನಿವಾಸದೆದುರು ಸ್ಥಾಪಿಸಲಾಗಿರುವ ಧ್ವಜ ಸ್ತಂಭವನ್ನು ತೆರವುಗೊಳಿಸಲು ಅಧಿಕಾರಿಗಳು ಹಾಗೂ ಪೊಲೀಸರು ತೆರಳಿದ್ದರು.

ತಾಂಬರನ್ ಪೊಲೀಸರ ಪ್ರಕಾರ, ಶುಕ್ರವಾರ ಸಂಜೆ ಅಣ್ಣಾಮಲೈ ನಿವಾಸದೆದುರಿನ ದ್ವಾರದ ಮೇಲೆ 45 ಅಡಿ ಎತ್ತರದ ಧ‍್ವಜ ಸ್ತಂಭವನ್ನು ಸ್ಥಾಪಿಸಲು ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ಹೇಳಿದ್ದಾರೆ.

ಧ್ವಜ ಸ್ತಂಭವು ಭಾರಿ ವೋಲ್ಟೇಜ್ ಹೊಂದಿರುವ ವಿದ್ಯುತ್ ತಂತಿಗಳಿಗೆ ತೀರಾ ಹತ್ತಿರವಿತ್ತು ಹಾಗೂ ಸಾರ್ವಜನಿಕರಿಗೆ ಅನನುಕೂಲವನ್ನುಂಟು ಮಾಡುತ್ತಿತ್ತು ಎಂದಿರುವ ಪೊಲೀಸರು, ಧ್ವಜ ಸ್ತಂಭವನ್ನು ತೆರವುಗೊಳಿಸುವ ನಿರ್ಧಾರವನ್ನು ಮಹಾನಗರ ಪಾಲಿಕೆಯು ನಂತರ ಕೈಗೊಂಡಿದ್ದು, ಪೊಲೀಸರು ಅದನ್ನು ತೆರವುಗೊಳಿಸಬೇಕಿತ್ತು ಎಂದೂ ತಿಳಿಸಿದ್ದಾರೆ.

ಇದರ ಬೆನ್ನಿಗೇ ಅಮರ್ ಪ್ರಸಾದ್ ರೆಡ್ಡಿ ಬಂಧನವನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಖಂಡಿಸಿದ್ದಾರೆ.

ಧ್ವಜ ಸ್ತಂಭವನ್ನು ತೆರವುಗೊಳಿಸಲು ಅಧಿಕಾರಿಗಳು ಹಾಗೂ ಕೆಲಸಗಾರರು ಸ್ಥಳಕ್ಕೆ ಧಾವಿಸಿದಾಗ ಸುಮಾರು 110 ಮಂದಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು ಎಂದು ಪೊಲೀಸರು ಹೇಳಿದ್ದಾರೆ.

“ಪದೇ ಪದೇ ಮನವಿ ಮಾಡಿದ ಹೊರತಾಗಿಯೂ ಅವರು ಸರ್ಕಾರಿ ಅಧಿಕಾರಿಗಳೊಂದಿಗೆ ವಾದಿಸುವುದನ್ನು ಮುಂದುವರಿಸಿದರು. ಇದರ ಬೆನ್ನಿಗೇ, ಕೆಲವು ಪ್ರತಿಭಟನಾಕಾರರನ್ನು ಬಂಧಿಸಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮರ್ ಪ್ರಸಾದ್ ರೆಡ್ಡಿ ಹೊರತಾಗಿ ಇನ್ನಿತರ ಐದು ಮಂದಿಯ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

andolanait

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

1 hour ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

1 hour ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

3 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

3 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

5 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

6 hours ago