ರಾಷ್ಟ್ರೀಯ

ತಮಿಳುನಾಡು ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿ ಬಂಧನ

ಚೆನ್ನೈ : ಚೆನ್ನೈನಲ್ಲಿ ಅನಧಿಕೃತವಾಗಿ ಸ್ಥಾಪಿಸಲಾಗಿದ್ದ ಧ್ವಜ ಸ್ತಂಭವನ್ನು ತೆರವುಗೊಳಿಸಲು ತಂದಿದ್ದ ಜೆಸಿಬಿ ಮೆಷಿನ್ ಮೇಲೆ ದಾಳಿ ನಡೆಸಿ, ಅದಕ್ಕೆ ಹಾನಿ ಮಾಡಿರುವ ಆರೋಪದಲ್ಲಿ ತಮಿಳುನಾಡು ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿಯನ್ನು ಶನಿವಾರ ಬಂಧಿಸಲಾಗಿದೆ. ಅವರನ್ನು ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು indiatoday.in ವರದಿ ಮಾಡಿದೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ನಿವಾಸದೆದುರು ಸ್ಥಾಪಿಸಲಾಗಿರುವ ಧ್ವಜ ಸ್ತಂಭವನ್ನು ತೆರವುಗೊಳಿಸಲು ಅಧಿಕಾರಿಗಳು ಹಾಗೂ ಪೊಲೀಸರು ತೆರಳಿದ್ದರು.

ತಾಂಬರನ್ ಪೊಲೀಸರ ಪ್ರಕಾರ, ಶುಕ್ರವಾರ ಸಂಜೆ ಅಣ್ಣಾಮಲೈ ನಿವಾಸದೆದುರಿನ ದ್ವಾರದ ಮೇಲೆ 45 ಅಡಿ ಎತ್ತರದ ಧ‍್ವಜ ಸ್ತಂಭವನ್ನು ಸ್ಥಾಪಿಸಲು ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ಹೇಳಿದ್ದಾರೆ.

ಧ್ವಜ ಸ್ತಂಭವು ಭಾರಿ ವೋಲ್ಟೇಜ್ ಹೊಂದಿರುವ ವಿದ್ಯುತ್ ತಂತಿಗಳಿಗೆ ತೀರಾ ಹತ್ತಿರವಿತ್ತು ಹಾಗೂ ಸಾರ್ವಜನಿಕರಿಗೆ ಅನನುಕೂಲವನ್ನುಂಟು ಮಾಡುತ್ತಿತ್ತು ಎಂದಿರುವ ಪೊಲೀಸರು, ಧ್ವಜ ಸ್ತಂಭವನ್ನು ತೆರವುಗೊಳಿಸುವ ನಿರ್ಧಾರವನ್ನು ಮಹಾನಗರ ಪಾಲಿಕೆಯು ನಂತರ ಕೈಗೊಂಡಿದ್ದು, ಪೊಲೀಸರು ಅದನ್ನು ತೆರವುಗೊಳಿಸಬೇಕಿತ್ತು ಎಂದೂ ತಿಳಿಸಿದ್ದಾರೆ.

ಇದರ ಬೆನ್ನಿಗೇ ಅಮರ್ ಪ್ರಸಾದ್ ರೆಡ್ಡಿ ಬಂಧನವನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಖಂಡಿಸಿದ್ದಾರೆ.

ಧ್ವಜ ಸ್ತಂಭವನ್ನು ತೆರವುಗೊಳಿಸಲು ಅಧಿಕಾರಿಗಳು ಹಾಗೂ ಕೆಲಸಗಾರರು ಸ್ಥಳಕ್ಕೆ ಧಾವಿಸಿದಾಗ ಸುಮಾರು 110 ಮಂದಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು ಎಂದು ಪೊಲೀಸರು ಹೇಳಿದ್ದಾರೆ.

“ಪದೇ ಪದೇ ಮನವಿ ಮಾಡಿದ ಹೊರತಾಗಿಯೂ ಅವರು ಸರ್ಕಾರಿ ಅಧಿಕಾರಿಗಳೊಂದಿಗೆ ವಾದಿಸುವುದನ್ನು ಮುಂದುವರಿಸಿದರು. ಇದರ ಬೆನ್ನಿಗೇ, ಕೆಲವು ಪ್ರತಿಭಟನಾಕಾರರನ್ನು ಬಂಧಿಸಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮರ್ ಪ್ರಸಾದ್ ರೆಡ್ಡಿ ಹೊರತಾಗಿ ಇನ್ನಿತರ ಐದು ಮಂದಿಯ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago