ಚೆನ್ನೈ: ತಮಿಳುನಾಡಿನ ದಕ್ಷಿಣ ತೂತುಕುಡಿ ಜಿಲ್ಲೆಯಲ್ಲಿ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ನವವಿವಾಹಿತ ದಂಪತಿ ಹತ್ಯೆಗೀಡಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಇವರಿಬ್ಬರು ಪ್ರೇಮ ವಿವಾಹವಾಗಿದ್ದರು.
ದಂಪತಿಯನ್ನು 24 ವರ್ಷದ ವಿ ಮರಿಸೆಲ್ವಂ ಮತ್ತು 20 ವರ್ಷದ ಎಂ ಕಾರ್ತಿಗ ಎಂದು ಗುರುತಿಸಲಾಗಿದೆ. ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿಯ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಅಕ್ಟೋಬರ್ 30ರಂದು ಮರಿಸೆಲ್ವಂ ಅವರೊಂದಿಗೆ ಎಂ ಕಾರ್ತಿಗ ಕೋವಿಲ್ಪಟ್ಟಿಗೆ ತೆರಳಿದ್ದರು. ಅದೇ ದಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾದ ಅವರು ಬುಧವಾರದವರೆಗೆ ಕೋವಿಲ್ಪಟ್ಟಿಯಲ್ಲಿ ಇದ್ದರು.
ಮರಿಸೆಲ್ವಂ ಗುರುವಾರ ಕಾರ್ತಿಗಾ ಅವರೊಂದಿಗೆ ಮುರುಗೇಶನ್ ನಗರದಲ್ಲಿರುವ ಅವರ ಮನೆಗೆ ಬಂದಾಗ, ಅವರ ಪೋಷಕರು ಅವರನ್ನು ಒಪ್ಪಿಕೊಂಡರು ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ತಂದೆ-ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮೂರು ದ್ವಿಚಕ್ರವಾಹನದಲ್ಲಿ ಬಂದಿದ್ದ ಆರು ಮಂದಿಯ ತಂಡ ಸಂಜೆ ವೇಳೆ ಅವರ ಮನೆಗೆ ನುಗ್ಗಿ ದಂಪತಿಯನ್ನು ಕೊಂದು ಸ್ಥಳದಿಂದ ಪರಾರಿಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೂತುಕುಡಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಭೀಕರ ಹತ್ಯೆಯಲ್ಲಿ ಯುವತಿಯ ಕುಟುಂಬದ ಕೈವಾಡ ಇರಬಹುದು ಎಂದು ತಮಿಳುನಾಡು ಪೊಲೀಸರು ಶಂಕಿಸಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಶೋಕಾಚರಣೆಯ ಅಲೆ ಎದ್ದಿದ್ದು, ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಎಲ್ ಬಾಲಾಜಿ ಸರವಣನ್ ಭೇಟಿ ನೀಡಿ, ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…