ಚೆನ್ನೈ: ತಮಿಳುನಾಡಿನ ದಕ್ಷಿಣ ತೂತುಕುಡಿ ಜಿಲ್ಲೆಯಲ್ಲಿ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ನವವಿವಾಹಿತ ದಂಪತಿ ಹತ್ಯೆಗೀಡಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಇವರಿಬ್ಬರು ಪ್ರೇಮ ವಿವಾಹವಾಗಿದ್ದರು.
ದಂಪತಿಯನ್ನು 24 ವರ್ಷದ ವಿ ಮರಿಸೆಲ್ವಂ ಮತ್ತು 20 ವರ್ಷದ ಎಂ ಕಾರ್ತಿಗ ಎಂದು ಗುರುತಿಸಲಾಗಿದೆ. ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿಯ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಅಕ್ಟೋಬರ್ 30ರಂದು ಮರಿಸೆಲ್ವಂ ಅವರೊಂದಿಗೆ ಎಂ ಕಾರ್ತಿಗ ಕೋವಿಲ್ಪಟ್ಟಿಗೆ ತೆರಳಿದ್ದರು. ಅದೇ ದಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾದ ಅವರು ಬುಧವಾರದವರೆಗೆ ಕೋವಿಲ್ಪಟ್ಟಿಯಲ್ಲಿ ಇದ್ದರು.
ಮರಿಸೆಲ್ವಂ ಗುರುವಾರ ಕಾರ್ತಿಗಾ ಅವರೊಂದಿಗೆ ಮುರುಗೇಶನ್ ನಗರದಲ್ಲಿರುವ ಅವರ ಮನೆಗೆ ಬಂದಾಗ, ಅವರ ಪೋಷಕರು ಅವರನ್ನು ಒಪ್ಪಿಕೊಂಡರು ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ತಂದೆ-ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮೂರು ದ್ವಿಚಕ್ರವಾಹನದಲ್ಲಿ ಬಂದಿದ್ದ ಆರು ಮಂದಿಯ ತಂಡ ಸಂಜೆ ವೇಳೆ ಅವರ ಮನೆಗೆ ನುಗ್ಗಿ ದಂಪತಿಯನ್ನು ಕೊಂದು ಸ್ಥಳದಿಂದ ಪರಾರಿಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೂತುಕುಡಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಭೀಕರ ಹತ್ಯೆಯಲ್ಲಿ ಯುವತಿಯ ಕುಟುಂಬದ ಕೈವಾಡ ಇರಬಹುದು ಎಂದು ತಮಿಳುನಾಡು ಪೊಲೀಸರು ಶಂಕಿಸಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಶೋಕಾಚರಣೆಯ ಅಲೆ ಎದ್ದಿದ್ದು, ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಎಲ್ ಬಾಲಾಜಿ ಸರವಣನ್ ಭೇಟಿ ನೀಡಿ, ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…