ರಾಷ್ಟ್ರೀಯ

ತಮಿಳುನಾಡು: ಪೋಷಕರ ವಿರೋಧ ನಡುವೆ ಮದುವೆಯಾಗಿದ್ದ ನವವಿವಾಹಿತ ಜೋಡಿ ಬರ್ಬರ ಹತ್ಯೆ

ಚೆನ್ನೈ: ತಮಿಳುನಾಡಿನ ದಕ್ಷಿಣ ತೂತುಕುಡಿ ಜಿಲ್ಲೆಯಲ್ಲಿ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ನವವಿವಾಹಿತ ದಂಪತಿ ಹತ್ಯೆಗೀಡಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಇವರಿಬ್ಬರು ಪ್ರೇಮ ವಿವಾಹವಾಗಿದ್ದರು.

ದಂಪತಿಯನ್ನು 24 ವರ್ಷದ ವಿ ಮರಿಸೆಲ್ವಂ ಮತ್ತು 20 ವರ್ಷದ ಎಂ ಕಾರ್ತಿಗ ಎಂದು ಗುರುತಿಸಲಾಗಿದೆ. ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿಯ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಅಕ್ಟೋಬರ್ 30ರಂದು ಮರಿಸೆಲ್ವಂ ಅವರೊಂದಿಗೆ ಎಂ ಕಾರ್ತಿಗ ಕೋವಿಲ್ಪಟ್ಟಿಗೆ ತೆರಳಿದ್ದರು. ಅದೇ ದಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾದ ಅವರು ಬುಧವಾರದವರೆಗೆ ಕೋವಿಲ್ಪಟ್ಟಿಯಲ್ಲಿ ಇದ್ದರು.

ಮರಿಸೆಲ್ವಂ ಗುರುವಾರ ಕಾರ್ತಿಗಾ ಅವರೊಂದಿಗೆ ಮುರುಗೇಶನ್ ನಗರದಲ್ಲಿರುವ ಅವರ ಮನೆಗೆ ಬಂದಾಗ, ಅವರ ಪೋಷಕರು ಅವರನ್ನು ಒಪ್ಪಿಕೊಂಡರು ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ತಂದೆ-ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮೂರು ದ್ವಿಚಕ್ರವಾಹನದಲ್ಲಿ ಬಂದಿದ್ದ ಆರು ಮಂದಿಯ ತಂಡ ಸಂಜೆ ವೇಳೆ ಅವರ ಮನೆಗೆ ನುಗ್ಗಿ ದಂಪತಿಯನ್ನು ಕೊಂದು ಸ್ಥಳದಿಂದ ಪರಾರಿಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೂತುಕುಡಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಭೀಕರ ಹತ್ಯೆಯಲ್ಲಿ ಯುವತಿಯ ಕುಟುಂಬದ ಕೈವಾಡ ಇರಬಹುದು ಎಂದು ತಮಿಳುನಾಡು ಪೊಲೀಸರು ಶಂಕಿಸಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಶೋಕಾಚರಣೆಯ ಅಲೆ ಎದ್ದಿದ್ದು, ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಎಲ್ ಬಾಲಾಜಿ ಸರವಣನ್ ಭೇಟಿ ನೀಡಿ, ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

3 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

4 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

4 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

6 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

6 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

6 hours ago