ತಮಿಳುನಾಡು: ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್(71) ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ವಿಜಯಕಾಂತ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟಿದ್ದಾರೆ.
ಇಂದು ಮುಂಜಾನೆ ವಿಜಯಕಾಂತ್ ಕೊನೆ ಉಸಿರೆಳೆದಿದ್ದಾರೆ ಎಂದು ಆಸ್ಪತ್ರೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಡಿಎಂಡಿಕೆ ಪಕ್ಷದ ಮುಖಂಡರು ವಿಜಯಕಾಂತ್ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದರು. ಶೀಘ್ರವೇ ಮನೆಗೆ ಮರಳಲಿದ್ದಾರೆ’ ಎಂದು ತಿಳಿಸಿದ್ದರು.
ಆ ಬಳಿಕ ಅವರಿಗೆ ಕೊವಿಡ್ ಇರುವ ವಿಚಾರ ದೃಢವಾಯಿತು. ಚಿಕಿತ್ಸೆಗೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಆಡಳಿತಮಂಡಳಿ ತಿಳಿಸಿದ್ದಾರೆ.
ತಮಿಳೂನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ವಿವಿಧ ರಾಜಕೀಪಕ್ಷದ ನಾಯಕರು ಹಾಗೂ ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…