ರಾಷ್ಟ್ರೀಯ

ಕಾವೇರಿ ನೀರು ಹರಿಸುವಂತೆ ಮತ್ತೆ ಖ್ಯಾತೆ ತೆಗೆದ ತಮಿಳುನಾಡು

ನವದೆಹಲಿ: ಸರಿಯಾದ ಸಮಯಕ್ಕೆ ಮಳೆಬಾರದೇ ರಾಜ್ಯಕ್ಕೆ ಬರಗಾಲ ಆವರಿಸಿದೆ. ಇದರಿಂದ ಕಾವೇರಿ ಕೊಳ್ಳದ ಜನರು ದಿನನಿತ್ಯ ನೀರಿಗಾಗಿ ಪರದಾಡುತಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಠಿಯಾಗಿದೆ. ಈ ನಡುವೆ ತಮಿಳುನಾಡು ಸರ್ಕಾರ ಮತ್ತೆ ಕಾವೇರಿ ನೀರಿಗಾಗಿ ಖ್ಯಾತೆ ತೆಗೆದಿದೆ.

ಕಳೆದ ವರ್ಷ ಮಳೆ ಕೈ ಕೊಟ್ಟಿದೆ, ಇದರಿಂದ ಕೆಆರ್‌ಎಸ್‌ ಜಲಾಶಯ ಭರ್ತಿಯಾಗದೇ, ಕಾವೇರಿ ಕೊಳ್ಳದ ಜನತೆ ದಿನನಿತ್ಯ ಮಳೆಗಾಗಿ ಎದುರು ನೋಡುತ್ತಿದ್ದಾರೆ. ಜೊತೆಗೆ ಈ ವರ್ಷದ ಬೇಸಿಗೆಯ ಬಿಸಿಲು ಹೆಚ್ಚಿದೆ. ಕೆಆರ್‌ಎಸ್‌ ನಲ್ಲಿ ಇದ್ದ ನೀರು ಬೇಸಿಗೆಯ ಬಿಸಿಲಿಗೆ ತತ್ತರಿಸಿದೆ. ಈ ನಡುವೆ ಮೂರು ತಿಂಗಳ ಬಾಕಿ ಇರುವ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಕಾವೇರಿ ನೀರು ನಿರ್ವಾಹಣಾ ಪ್ರಾಧಿಕಾರ (ಕೆಡಬ್ಲ್ಯುಎಂಎ) ಸಭೆಯಲ್ಲಿ ತಮಿಳುನಾಡು ಆಗ್ರಹಿಸಿದೆ.

ಬಾಕಿ ಉಳಿದಿರುವ 10 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಸೂಚಿಸುವಂತೆ ತಮಿಳುನಾಡು ಸರ್ಕಾರ ಸಭೆಯಲ್ಲಿ ಒತ್ತಾಯಿಸಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕದ ಅಧಿಕಾರಿಗಳು, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯ ಇದೆ. ಹೀಗಾಗಿ ನೀರು ಬೇಕಾಗಿರುವುದರಿಂದ ನೀರು ಪೂರೈಕೆ ಸಾಧ್ಯವಿಲ್ಲ ಎಂದು ವಾದ ಮಂಡಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

11 mins ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

14 mins ago

ಓದುಗರ ಪತ್ರ:  ‘ರಾಮ ಜಪ’ ಮಸೂದೆ ತಿರಸ್ಕರಿಸಿ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…

17 mins ago

‘ಮಾದಾರಿ ಮಾದಯ್ಯ’ ವರ್ತಮಾನದ ಅವಶ್ಯ ರಂಗ ಪ್ರಯೋಗ

ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…

60 mins ago

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

4 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

4 hours ago