ನವದೆಹಲಿ: ಸರಿಯಾದ ಸಮಯಕ್ಕೆ ಮಳೆಬಾರದೇ ರಾಜ್ಯಕ್ಕೆ ಬರಗಾಲ ಆವರಿಸಿದೆ. ಇದರಿಂದ ಕಾವೇರಿ ಕೊಳ್ಳದ ಜನರು ದಿನನಿತ್ಯ ನೀರಿಗಾಗಿ ಪರದಾಡುತಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಠಿಯಾಗಿದೆ. ಈ ನಡುವೆ ತಮಿಳುನಾಡು ಸರ್ಕಾರ ಮತ್ತೆ ಕಾವೇರಿ ನೀರಿಗಾಗಿ ಖ್ಯಾತೆ ತೆಗೆದಿದೆ.
ಕಳೆದ ವರ್ಷ ಮಳೆ ಕೈ ಕೊಟ್ಟಿದೆ, ಇದರಿಂದ ಕೆಆರ್ಎಸ್ ಜಲಾಶಯ ಭರ್ತಿಯಾಗದೇ, ಕಾವೇರಿ ಕೊಳ್ಳದ ಜನತೆ ದಿನನಿತ್ಯ ಮಳೆಗಾಗಿ ಎದುರು ನೋಡುತ್ತಿದ್ದಾರೆ. ಜೊತೆಗೆ ಈ ವರ್ಷದ ಬೇಸಿಗೆಯ ಬಿಸಿಲು ಹೆಚ್ಚಿದೆ. ಕೆಆರ್ಎಸ್ ನಲ್ಲಿ ಇದ್ದ ನೀರು ಬೇಸಿಗೆಯ ಬಿಸಿಲಿಗೆ ತತ್ತರಿಸಿದೆ. ಈ ನಡುವೆ ಮೂರು ತಿಂಗಳ ಬಾಕಿ ಇರುವ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಕಾವೇರಿ ನೀರು ನಿರ್ವಾಹಣಾ ಪ್ರಾಧಿಕಾರ (ಕೆಡಬ್ಲ್ಯುಎಂಎ) ಸಭೆಯಲ್ಲಿ ತಮಿಳುನಾಡು ಆಗ್ರಹಿಸಿದೆ.
ಬಾಕಿ ಉಳಿದಿರುವ 10 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಸೂಚಿಸುವಂತೆ ತಮಿಳುನಾಡು ಸರ್ಕಾರ ಸಭೆಯಲ್ಲಿ ಒತ್ತಾಯಿಸಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕದ ಅಧಿಕಾರಿಗಳು, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯ ಇದೆ. ಹೀಗಾಗಿ ನೀರು ಬೇಕಾಗಿರುವುದರಿಂದ ನೀರು ಪೂರೈಕೆ ಸಾಧ್ಯವಿಲ್ಲ ಎಂದು ವಾದ ಮಂಡಿಸಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…