ರಾಷ್ಟ್ರೀಯ

ಮಾರುಕಟ್ಟೆಗೆ ಲಗ್ಗೆ ಇಡಲಿದೆ ಬೈಕ್‌ನಷ್ಟೇ ಮೈಲೇಜ್‌ ಕೊಡುವ ಟಾಟಾ ನೆಕ್ಸಾನ್‌ ಸಿಎನ್‌ಜಿ!

ನವದೆಹಲಿ :  ನಾಳೆಯಿಂದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ (Bharat Mobility Global Expo 2024) ಆರಂಭವಾಗಿದ್ದು, ಅಲ್ಲಿ ಕಂಪನಿಯು ನೆಕ್ಸಾನ್ ಸಿಎನ್‌ಜಿ ಕಾನ್ಸೆಪ್ಟ್ ಕಾರನ್ನು ಅನಾವರಣ ಮಾಡಲಿದೆ ಎಂಬ ಮಾಹಿತಿ ಲಭ್ಯವಿದೆ.

ಟಾಟಾ, ನೆಕ್ಸಾನ್ ಸಿಎನ್‌ಜಿ (Nexon CNG) ಮಾತ್ರವಲ್ಲದೆ ನೆಕ್ಸಾನ್ ಇವಿ ಡಾರ್ಕ್ (Nexon EV Dark), ಸಫಾರಿ ಡಾರ್ಕ್ (Safari Dark), ಕರ್ವ್ವ್ ಕಾನ್ಸೆಪ್ಟ್ (Curvv Concept), ಆಲ್ಟ್ರೊಜ್ ರೇಸರ್ ಕಾನ್ಸೆಪ್ಟ್ (Harrier EV Concept) ಸೇರಿದಂತೆ 8 ಕಾರುಗಳನ್ನು ಪ್ರದರ್ಶಿಸಲಿದೆ. ಕಂಪನಿ ಈ ಕಾರುಗಳು ಆಕರ್ಷಕ ವೈಶಿಷ್ಟ್ಯ ಮತ್ತು ವಿನ್ಯಾಸವನ್ನು ಹೊಂದಿರುವ ನೀರಿಕ್ಷೆಯಿದೆ.

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿರುವ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ, 1.2-ಲೀಟರ್ ಟರ್ಬೊ ಪೆಟ್ರೋಲ್, ಫ್ಯಾಕ್ಟರಿ ಫಿಟೆಡ್ ಟ್ವಿನ್ ಸಿಲಿಂಡರ್ ಸಿಎನ್‌ಜಿ ಎಂಜಿನ್ ಹೊಂದಿರುವ ಸಾಧ್ಯತೆಯಿದೆ.

ಇದರ ಫ್ಯುಯೆಲ್ (ಸಿಎನ್‌ಜಿ) ಟ್ಯಾಂಕ್ 60 ಲೀಟರ್ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಈಗಾಗಲೇ, ನೆಕ್ಸಾನ್ ಎಸ್‌ಯುವಿ ಪೆಟ್ರೋಲ್, ಡೀಸೆಲ್ ಹಾಗೂ ಎಲೆಕ್ಟ್ರಿಕ್ ರೂಪದಲ್ಲಿ ದೊರೆಯುತ್ತದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಪಂಚ್ ಸಿಎನ್‌ಜಿ ಕಾರು, 26.99 kmpl ಮೈಲೇಜ್ ನೀಡುತ್ತದೆ. ಮುಂಬರಲಿರುವ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ ಅದಕ್ಕಿಂತ ಹೆಚ್ಚಿನ ಮೈಲೇಜ್ ಕೊಡಲಿದೆ ಎಂದು ಅಂದಾಜಿಸಲಾಗಿದೆ.

ಇಂಧನ – ಎಲೆಕ್ಟ್ರಿಕ್ ಚಾಲಿತ ನೆಕ್ಸಾನ್, ಕ್ರಮವಾಗಿ ರೂ.8.10 ಲಕ್ಷ, ರೂ.14.74 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿವೆ. ಸಿಎನ್‌ಜಿ ಕಾರು ಇವೆರಡರ ನಡುವೆ ಬೆಲೆಯನ್ನು ಹೊಂದಿರಬಹುದು ಎನ್ನಲಾಗಿದೆ.

andolanait

Recent Posts

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

48 seconds ago

ಗಣರಾಜ್ಯೋತ್ಸವದ ಅಯೋಮಯ ಇಂಗ್ಲಿಷ್ ಭಾಷಣ

ಗಣರಾಜ್ಯೋತ್ಸವ ಎಂದೊಡನೆ ನಾನು ಪ್ರೌಢಶಾಲೆಯಲ್ಲಿ ಸತತವಾಗಿ ೩ವರ್ಷ ಮಾಡಿದ ಇಂಗ್ಲಿಷ್ ಭಾಷಣ ನೆನಪಾಗುತ್ತದೆ. ಈ ದಿನದ ಮಹತ್ವದ ಬಗ್ಗೆ ಇತ್ತೀಚೆಗೆ…

4 mins ago

ಈಗ ಗಣರಾಜ್ಯೋತ್ಸವದಲ್ಲೂ ದ್ವೇಷದ ಉರಿಗಾಳಿ

ಗಣರಾಜ್ಯೋತ್ಸವ ಅಂದರೆ ನನಗೆ ನೆನಪಾಗೋದು ಶಾಲಾ ದಿನಗಳು. ಗಣರಾಜ್ಯದ ಹಿಂದಿನ ಎರಡು ಮೂರು ದಿನಗಳು ಯಾವುದೇ ತರಗತಿ ನಡೆಯುತ್ತಿರ ಲಿಲ್ಲ.…

7 mins ago

ಹಾಳೆ ಅಂಬುಲೆ ಉಯ್ಯಾಲೆ ಆಡಿ…

ನಾನು ಕೆಲಸ ಮಾಡುವ ಪಿರಿಯಾಪಟ್ಟಣದ ಶಾಲೆ ಮೈಸೂರು ಜಿಲ್ಲೆಯಲ್ಲೇ ವಿಶೇಷವಾದ ಶಾಲೆ. ಮೈಸೂರು ಜಿಲ್ಲೆಗೆ ಸೇರಿದ್ದರೂ ಕೊಡಗು ಜಿಲ್ಲೆಗೆ ಸಮೀಪ…

11 mins ago

ಗಣರಾಜ್ಯ ಎಂಬುದು ಹಲವು ಪ್ರಶ್ನೆಗಳ ಒಂದು ವಾಸ್ತವ

ಚಿಕ್ಕಂದಿನಲ್ಲಿ ನನಗೆ ಭಾರತ ಎಂದರೆ ತುಂಬಾ  ಸುಂದರವಾದ ಕನಸಿನ ದೇಶವಾಗಿತ್ತು. ಶಾಲೆಯಲ್ಲಿ ನಾವು ನೋಡಿದ ಗಣರಾಜ್ಯ ದಿನಾಚರಣೆ, ಧ್ವಜಾರೋಹಣ, ರಾಷ್ಟ್ರಗೀತೆ,…

14 mins ago

125 ಬೀದಿನಾಯಿಗಳ ಸ್ಥಳಾಂತರ: ಮಡಿಕೇರಿ ನಗರಸಭೆ ನಿರ್ಧಾರ

ಪುನೀತ್ ಮಡಿಕೇರಿ ಬೀದಿನಾಯಿಗಳ ಹಾವಳಿ ಮಿತಿಮೀರಿದ ಹಿನ್ನೆಲೆ; ೨ ಎಕರೆ ಪ್ರದೇಶದಲ್ಲಿ ಆಶ್ರಯ ತಾಣ ನಿರ್ಮಿಸಲು ಟೆಂಡರ್ ಮಡಿಕೇರಿ: ಬೇರೆಡೆಗೆ…

20 mins ago