ರಾಷ್ಟ್ರೀಯ

ಮಾರುಕಟ್ಟೆಗೆ ಲಗ್ಗೆ ಇಡಲಿದೆ ಬೈಕ್‌ನಷ್ಟೇ ಮೈಲೇಜ್‌ ಕೊಡುವ ಟಾಟಾ ನೆಕ್ಸಾನ್‌ ಸಿಎನ್‌ಜಿ!

ನವದೆಹಲಿ :  ನಾಳೆಯಿಂದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ (Bharat Mobility Global Expo 2024) ಆರಂಭವಾಗಿದ್ದು, ಅಲ್ಲಿ ಕಂಪನಿಯು ನೆಕ್ಸಾನ್ ಸಿಎನ್‌ಜಿ ಕಾನ್ಸೆಪ್ಟ್ ಕಾರನ್ನು ಅನಾವರಣ ಮಾಡಲಿದೆ ಎಂಬ ಮಾಹಿತಿ ಲಭ್ಯವಿದೆ.

ಟಾಟಾ, ನೆಕ್ಸಾನ್ ಸಿಎನ್‌ಜಿ (Nexon CNG) ಮಾತ್ರವಲ್ಲದೆ ನೆಕ್ಸಾನ್ ಇವಿ ಡಾರ್ಕ್ (Nexon EV Dark), ಸಫಾರಿ ಡಾರ್ಕ್ (Safari Dark), ಕರ್ವ್ವ್ ಕಾನ್ಸೆಪ್ಟ್ (Curvv Concept), ಆಲ್ಟ್ರೊಜ್ ರೇಸರ್ ಕಾನ್ಸೆಪ್ಟ್ (Harrier EV Concept) ಸೇರಿದಂತೆ 8 ಕಾರುಗಳನ್ನು ಪ್ರದರ್ಶಿಸಲಿದೆ. ಕಂಪನಿ ಈ ಕಾರುಗಳು ಆಕರ್ಷಕ ವೈಶಿಷ್ಟ್ಯ ಮತ್ತು ವಿನ್ಯಾಸವನ್ನು ಹೊಂದಿರುವ ನೀರಿಕ್ಷೆಯಿದೆ.

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿರುವ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ, 1.2-ಲೀಟರ್ ಟರ್ಬೊ ಪೆಟ್ರೋಲ್, ಫ್ಯಾಕ್ಟರಿ ಫಿಟೆಡ್ ಟ್ವಿನ್ ಸಿಲಿಂಡರ್ ಸಿಎನ್‌ಜಿ ಎಂಜಿನ್ ಹೊಂದಿರುವ ಸಾಧ್ಯತೆಯಿದೆ.

ಇದರ ಫ್ಯುಯೆಲ್ (ಸಿಎನ್‌ಜಿ) ಟ್ಯಾಂಕ್ 60 ಲೀಟರ್ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಈಗಾಗಲೇ, ನೆಕ್ಸಾನ್ ಎಸ್‌ಯುವಿ ಪೆಟ್ರೋಲ್, ಡೀಸೆಲ್ ಹಾಗೂ ಎಲೆಕ್ಟ್ರಿಕ್ ರೂಪದಲ್ಲಿ ದೊರೆಯುತ್ತದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಪಂಚ್ ಸಿಎನ್‌ಜಿ ಕಾರು, 26.99 kmpl ಮೈಲೇಜ್ ನೀಡುತ್ತದೆ. ಮುಂಬರಲಿರುವ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ ಅದಕ್ಕಿಂತ ಹೆಚ್ಚಿನ ಮೈಲೇಜ್ ಕೊಡಲಿದೆ ಎಂದು ಅಂದಾಜಿಸಲಾಗಿದೆ.

ಇಂಧನ – ಎಲೆಕ್ಟ್ರಿಕ್ ಚಾಲಿತ ನೆಕ್ಸಾನ್, ಕ್ರಮವಾಗಿ ರೂ.8.10 ಲಕ್ಷ, ರೂ.14.74 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿವೆ. ಸಿಎನ್‌ಜಿ ಕಾರು ಇವೆರಡರ ನಡುವೆ ಬೆಲೆಯನ್ನು ಹೊಂದಿರಬಹುದು ಎನ್ನಲಾಗಿದೆ.

andolanait

Recent Posts

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

5 mins ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

10 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

21 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

58 mins ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

1 hour ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

2 hours ago