ರಾಷ್ಟ್ರೀಯ

ಮಾರುಕಟ್ಟೆಗೆ ಲಗ್ಗೆ ಇಡಲಿದೆ ಬೈಕ್‌ನಷ್ಟೇ ಮೈಲೇಜ್‌ ಕೊಡುವ ಟಾಟಾ ನೆಕ್ಸಾನ್‌ ಸಿಎನ್‌ಜಿ!

ನವದೆಹಲಿ :  ನಾಳೆಯಿಂದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ (Bharat Mobility Global Expo 2024) ಆರಂಭವಾಗಿದ್ದು, ಅಲ್ಲಿ ಕಂಪನಿಯು ನೆಕ್ಸಾನ್ ಸಿಎನ್‌ಜಿ ಕಾನ್ಸೆಪ್ಟ್ ಕಾರನ್ನು ಅನಾವರಣ ಮಾಡಲಿದೆ ಎಂಬ ಮಾಹಿತಿ ಲಭ್ಯವಿದೆ.

ಟಾಟಾ, ನೆಕ್ಸಾನ್ ಸಿಎನ್‌ಜಿ (Nexon CNG) ಮಾತ್ರವಲ್ಲದೆ ನೆಕ್ಸಾನ್ ಇವಿ ಡಾರ್ಕ್ (Nexon EV Dark), ಸಫಾರಿ ಡಾರ್ಕ್ (Safari Dark), ಕರ್ವ್ವ್ ಕಾನ್ಸೆಪ್ಟ್ (Curvv Concept), ಆಲ್ಟ್ರೊಜ್ ರೇಸರ್ ಕಾನ್ಸೆಪ್ಟ್ (Harrier EV Concept) ಸೇರಿದಂತೆ 8 ಕಾರುಗಳನ್ನು ಪ್ರದರ್ಶಿಸಲಿದೆ. ಕಂಪನಿ ಈ ಕಾರುಗಳು ಆಕರ್ಷಕ ವೈಶಿಷ್ಟ್ಯ ಮತ್ತು ವಿನ್ಯಾಸವನ್ನು ಹೊಂದಿರುವ ನೀರಿಕ್ಷೆಯಿದೆ.

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿರುವ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ, 1.2-ಲೀಟರ್ ಟರ್ಬೊ ಪೆಟ್ರೋಲ್, ಫ್ಯಾಕ್ಟರಿ ಫಿಟೆಡ್ ಟ್ವಿನ್ ಸಿಲಿಂಡರ್ ಸಿಎನ್‌ಜಿ ಎಂಜಿನ್ ಹೊಂದಿರುವ ಸಾಧ್ಯತೆಯಿದೆ.

ಇದರ ಫ್ಯುಯೆಲ್ (ಸಿಎನ್‌ಜಿ) ಟ್ಯಾಂಕ್ 60 ಲೀಟರ್ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಈಗಾಗಲೇ, ನೆಕ್ಸಾನ್ ಎಸ್‌ಯುವಿ ಪೆಟ್ರೋಲ್, ಡೀಸೆಲ್ ಹಾಗೂ ಎಲೆಕ್ಟ್ರಿಕ್ ರೂಪದಲ್ಲಿ ದೊರೆಯುತ್ತದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಪಂಚ್ ಸಿಎನ್‌ಜಿ ಕಾರು, 26.99 kmpl ಮೈಲೇಜ್ ನೀಡುತ್ತದೆ. ಮುಂಬರಲಿರುವ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ ಅದಕ್ಕಿಂತ ಹೆಚ್ಚಿನ ಮೈಲೇಜ್ ಕೊಡಲಿದೆ ಎಂದು ಅಂದಾಜಿಸಲಾಗಿದೆ.

ಇಂಧನ – ಎಲೆಕ್ಟ್ರಿಕ್ ಚಾಲಿತ ನೆಕ್ಸಾನ್, ಕ್ರಮವಾಗಿ ರೂ.8.10 ಲಕ್ಷ, ರೂ.14.74 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿವೆ. ಸಿಎನ್‌ಜಿ ಕಾರು ಇವೆರಡರ ನಡುವೆ ಬೆಲೆಯನ್ನು ಹೊಂದಿರಬಹುದು ಎನ್ನಲಾಗಿದೆ.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

2 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

4 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

5 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

6 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

8 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

8 hours ago