ರಾಷ್ಟ್ರೀಯ

ಮಾರುಕಟ್ಟೆಗೆ ಲಗ್ಗೆ ಇಡಲಿದೆ ಬೈಕ್‌ನಷ್ಟೇ ಮೈಲೇಜ್‌ ಕೊಡುವ ಟಾಟಾ ನೆಕ್ಸಾನ್‌ ಸಿಎನ್‌ಜಿ!

ನವದೆಹಲಿ :  ನಾಳೆಯಿಂದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ (Bharat Mobility Global Expo 2024) ಆರಂಭವಾಗಿದ್ದು, ಅಲ್ಲಿ ಕಂಪನಿಯು ನೆಕ್ಸಾನ್ ಸಿಎನ್‌ಜಿ ಕಾನ್ಸೆಪ್ಟ್ ಕಾರನ್ನು ಅನಾವರಣ ಮಾಡಲಿದೆ ಎಂಬ ಮಾಹಿತಿ ಲಭ್ಯವಿದೆ.

ಟಾಟಾ, ನೆಕ್ಸಾನ್ ಸಿಎನ್‌ಜಿ (Nexon CNG) ಮಾತ್ರವಲ್ಲದೆ ನೆಕ್ಸಾನ್ ಇವಿ ಡಾರ್ಕ್ (Nexon EV Dark), ಸಫಾರಿ ಡಾರ್ಕ್ (Safari Dark), ಕರ್ವ್ವ್ ಕಾನ್ಸೆಪ್ಟ್ (Curvv Concept), ಆಲ್ಟ್ರೊಜ್ ರೇಸರ್ ಕಾನ್ಸೆಪ್ಟ್ (Harrier EV Concept) ಸೇರಿದಂತೆ 8 ಕಾರುಗಳನ್ನು ಪ್ರದರ್ಶಿಸಲಿದೆ. ಕಂಪನಿ ಈ ಕಾರುಗಳು ಆಕರ್ಷಕ ವೈಶಿಷ್ಟ್ಯ ಮತ್ತು ವಿನ್ಯಾಸವನ್ನು ಹೊಂದಿರುವ ನೀರಿಕ್ಷೆಯಿದೆ.

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿರುವ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ, 1.2-ಲೀಟರ್ ಟರ್ಬೊ ಪೆಟ್ರೋಲ್, ಫ್ಯಾಕ್ಟರಿ ಫಿಟೆಡ್ ಟ್ವಿನ್ ಸಿಲಿಂಡರ್ ಸಿಎನ್‌ಜಿ ಎಂಜಿನ್ ಹೊಂದಿರುವ ಸಾಧ್ಯತೆಯಿದೆ.

ಇದರ ಫ್ಯುಯೆಲ್ (ಸಿಎನ್‌ಜಿ) ಟ್ಯಾಂಕ್ 60 ಲೀಟರ್ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಈಗಾಗಲೇ, ನೆಕ್ಸಾನ್ ಎಸ್‌ಯುವಿ ಪೆಟ್ರೋಲ್, ಡೀಸೆಲ್ ಹಾಗೂ ಎಲೆಕ್ಟ್ರಿಕ್ ರೂಪದಲ್ಲಿ ದೊರೆಯುತ್ತದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಪಂಚ್ ಸಿಎನ್‌ಜಿ ಕಾರು, 26.99 kmpl ಮೈಲೇಜ್ ನೀಡುತ್ತದೆ. ಮುಂಬರಲಿರುವ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ ಅದಕ್ಕಿಂತ ಹೆಚ್ಚಿನ ಮೈಲೇಜ್ ಕೊಡಲಿದೆ ಎಂದು ಅಂದಾಜಿಸಲಾಗಿದೆ.

ಇಂಧನ – ಎಲೆಕ್ಟ್ರಿಕ್ ಚಾಲಿತ ನೆಕ್ಸಾನ್, ಕ್ರಮವಾಗಿ ರೂ.8.10 ಲಕ್ಷ, ರೂ.14.74 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿವೆ. ಸಿಎನ್‌ಜಿ ಕಾರು ಇವೆರಡರ ನಡುವೆ ಬೆಲೆಯನ್ನು ಹೊಂದಿರಬಹುದು ಎನ್ನಲಾಗಿದೆ.

andolanait

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

12 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

14 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

17 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

21 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

1 day ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

1 day ago