ರಾಷ್ಟ್ರೀಯ

ಮಾರುಕಟ್ಟೆಗೆ ಲಗ್ಗೆ ಇಡಲಿದೆ ಬೈಕ್‌ನಷ್ಟೇ ಮೈಲೇಜ್‌ ಕೊಡುವ ಟಾಟಾ ನೆಕ್ಸಾನ್‌ ಸಿಎನ್‌ಜಿ!

ನವದೆಹಲಿ :  ನಾಳೆಯಿಂದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ (Bharat Mobility Global Expo 2024) ಆರಂಭವಾಗಿದ್ದು, ಅಲ್ಲಿ ಕಂಪನಿಯು ನೆಕ್ಸಾನ್ ಸಿಎನ್‌ಜಿ ಕಾನ್ಸೆಪ್ಟ್ ಕಾರನ್ನು ಅನಾವರಣ ಮಾಡಲಿದೆ ಎಂಬ ಮಾಹಿತಿ ಲಭ್ಯವಿದೆ.

ಟಾಟಾ, ನೆಕ್ಸಾನ್ ಸಿಎನ್‌ಜಿ (Nexon CNG) ಮಾತ್ರವಲ್ಲದೆ ನೆಕ್ಸಾನ್ ಇವಿ ಡಾರ್ಕ್ (Nexon EV Dark), ಸಫಾರಿ ಡಾರ್ಕ್ (Safari Dark), ಕರ್ವ್ವ್ ಕಾನ್ಸೆಪ್ಟ್ (Curvv Concept), ಆಲ್ಟ್ರೊಜ್ ರೇಸರ್ ಕಾನ್ಸೆಪ್ಟ್ (Harrier EV Concept) ಸೇರಿದಂತೆ 8 ಕಾರುಗಳನ್ನು ಪ್ರದರ್ಶಿಸಲಿದೆ. ಕಂಪನಿ ಈ ಕಾರುಗಳು ಆಕರ್ಷಕ ವೈಶಿಷ್ಟ್ಯ ಮತ್ತು ವಿನ್ಯಾಸವನ್ನು ಹೊಂದಿರುವ ನೀರಿಕ್ಷೆಯಿದೆ.

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿರುವ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ, 1.2-ಲೀಟರ್ ಟರ್ಬೊ ಪೆಟ್ರೋಲ್, ಫ್ಯಾಕ್ಟರಿ ಫಿಟೆಡ್ ಟ್ವಿನ್ ಸಿಲಿಂಡರ್ ಸಿಎನ್‌ಜಿ ಎಂಜಿನ್ ಹೊಂದಿರುವ ಸಾಧ್ಯತೆಯಿದೆ.

ಇದರ ಫ್ಯುಯೆಲ್ (ಸಿಎನ್‌ಜಿ) ಟ್ಯಾಂಕ್ 60 ಲೀಟರ್ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಈಗಾಗಲೇ, ನೆಕ್ಸಾನ್ ಎಸ್‌ಯುವಿ ಪೆಟ್ರೋಲ್, ಡೀಸೆಲ್ ಹಾಗೂ ಎಲೆಕ್ಟ್ರಿಕ್ ರೂಪದಲ್ಲಿ ದೊರೆಯುತ್ತದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಪಂಚ್ ಸಿಎನ್‌ಜಿ ಕಾರು, 26.99 kmpl ಮೈಲೇಜ್ ನೀಡುತ್ತದೆ. ಮುಂಬರಲಿರುವ ನೆಕ್ಸಾನ್ ಸಿಎನ್‌ಜಿ ಎಸ್‌ಯುವಿ ಅದಕ್ಕಿಂತ ಹೆಚ್ಚಿನ ಮೈಲೇಜ್ ಕೊಡಲಿದೆ ಎಂದು ಅಂದಾಜಿಸಲಾಗಿದೆ.

ಇಂಧನ – ಎಲೆಕ್ಟ್ರಿಕ್ ಚಾಲಿತ ನೆಕ್ಸಾನ್, ಕ್ರಮವಾಗಿ ರೂ.8.10 ಲಕ್ಷ, ರೂ.14.74 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿವೆ. ಸಿಎನ್‌ಜಿ ಕಾರು ಇವೆರಡರ ನಡುವೆ ಬೆಲೆಯನ್ನು ಹೊಂದಿರಬಹುದು ಎನ್ನಲಾಗಿದೆ.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

2 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

3 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

4 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

4 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

12 hours ago