ರಾಷ್ಟ್ರೀಯ

ತೆಲಂಗಾಣ: ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತ ನಟ ಪವನ್ ಕಲ್ಯಾಣ್

ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷದೊಂದಿಗೆ ಬಿಜೆಪಿ ಸಖ್ಯ ಮುಂದುವರೆದಿದೆ. ತೆಲಂಗಾಣದಲ್ಲಿ ಬಿಜೆಪಿ ಹೆಜ್ಜೆಗುರುತು ಮೂಡಿಸುವ ಹುಮ್ಮಸ್ಸಿನಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪವನ್ ಕಲ್ಯಾಣ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಉಭಯ ಪಕ್ಷಗಳ ನಡುವಿನ ಮೈತ್ರಿ ಮುಂದುವರೆಯಲಿದೆ ಎಂಬ ಸೂಚನೆ ನೀಡಿದ್ದಾರೆ.

ತೆಲಂಗಾಣದಲ್ಲಿ ಜನಸೇನಾ ಪಕ್ಷಕ್ಕೆ ಎಂಟು ಸ್ಥಾನಗಳನ್ನು ನೀಡಲಾಗಿದೆ ಅಲ್ಲಿ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷವು ರೇಸ್‍ನಲ್ಲಿ ಇರುವುದಿಲ್ಲ. ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಇಲ್ಲಿಯವರೆಗೆ ರಾಜಕಾರಣದಲ್ಲಿ ಅಂತಹ ದೊಡ್ಡ ಪ್ರಭಾವ ಬೀರಿಲ್ಲ, ಆದರೂ ಕೆ ಚಂದ್ರಶೇಖರ್ ರಾವ್ ಅವರ ಭಾರತ ರಾಷ್ಟ್ರ ಸಮಿತಿಯಿಂದ ಆಳ್ವಿಕೆ ನಡೆಸುತ್ತಿರುವ ರಾಜ್ಯದಲ್ಲಿ ನಟನ ದೊಡ್ಡ ಅಭಿಮಾನಿ ಬಳಗವನ್ನು ಸೆಳೆಯಲು ಬಿಜೆಪಿ ಆಶಿಸುತ್ತಿದೆ.

ಪವನ್ ಕಲ್ಯಾಣ್ ಆಂಧ್ರಪ್ರದೇಶದಲ್ಲಿ ನಾಯ್ಡು ಅವರೊಂದಿಗೆ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ. ಆದರೆ ಟಿಡಿಪಿ ಮುಖ್ಯಸ್ಥರು 2018 ರ ಒಕ್ಕೂಟದಿಂದ ಹೊರನಡೆಯುವ ನಿರ್ಧಾರದ ನಂತರ ಮತ್ತೆ ಎನ್‍ಡಿಎ ಬಣದಲ್ಲಿ ಗುರುತಿಸಿಕೊಂಡಿಲ್ಲ.

ಆದರೆ ಇದು ಪವನ್ ಕಲ್ಯಾಣ್ ಅವರ ಬಿಜೆಪಿ ಜೊತೆಗಿನ ಸಂಬಂಧದ ಮೇಲೆ ಪರಿಣಾಮ ಬೀರಿಲ್ಲ. ಇಂದು ಹೈದರಾಬಾದ್‍ನಲ್ಲಿ ನಡೆದ ಸಭೆಯಲ್ಲಿ, ಜನಸೇನಾ ಪಕ್ಷದ ಮುಖ್ಯಸ್ಥರು, ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಪ್ರಧಾನಿ ಮೋದಿಯವರ ಕಠಿಣತೆ ಮತ್ತು ಚುನಾವಣಾ ಲಾಭಗಳನ್ನು ಮಾತ್ರ ನೋಡದೆ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕಾಗಿ ನಾನು ಇಷ್ಟಪಡುತ್ತೇನೆ ಎಂದು ಹೇಳಿದರು.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

10 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

10 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

11 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

11 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

16 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

19 hours ago