ರಾಷ್ಟ್ರೀಯ

ತೆಲಂಗಾಣ ವಿಧಾನಸಭಾ ಚುನಾವಣೆ: 6 ಗ್ಯಾರೆಂಟಿ ಘೋಷಿಸಿದ ಕಾಂಗ್ರೆಸ್‌

ಹೈದರಾಬಾದ್‌  : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಗೆ ಗ್ಯಾರೆಂಟಿಗಳು ಗೆಲುವು ನೀಡಿದ್ದು, ಗ್ಯಾರೆಂಟಿಗಳ ಮೂಲಕ ಗೆಲುವು ಸಾಧಿಸಿ ಬಿಜೆಪಿಗೆ ಮುಖಭಂಗ ಉಂಟುಮಾಡಿತ್ತು. ಅದೇ ರಣತಂತ್ರವನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪ್ರಯೋಗಿಸಲು ಕಾಂಗ್ರೆಸ್‌ ಮುಂದಾಗಿದ್ದು, ಪ್ರಮುಖ 6 ಗ್ಯಾರೆಂಟಿಗಳನ್ನು ಘೋಷಿಸಿದೆ.

ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ತೆಲಂಗಾಣ ಚುನಾವಣೆಯಲ್ಲಿ 6 ಗ್ಯಾರೆಂಟಿಗಳನ್ನು ಘೋಷಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಗ್ಯಾರೆಂಟಿಗಳನ್ನು ಘೋಷಿಸಿ, ಅವುಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ಇದೇ ರೀತಿಯಲ್ಲಿ ತೆಲಂಗಾಣದ ಮತದಾರರನ್ನು ಸೆಳೆಯಲು ಗ್ಯಾರೆಂಟಿ ಅಸ್ತ್ರ ಪ್ರಯೋಗಿಸಿದ್ದಾರೆ. ಸ್ಟಾರ್‌ ಪ್ರಚಾರಕರ ದಂಡೇ ತೆಲಂಗಾಣದತ್ತ ಮುಖ ಮಾಡಿದ್ದು, ಕರ್ನಾಟಕ ಮಾದರಿಯಲ್ಲಿ ರೋಡ್‌ ಶೋ, ಹಲವಾರು ನಾಯಕ ಸಭೆಗಳನ್ನು ಆಯೋಜಿಸಿದ್ದಾರೆ. ರಾಜ್ಯದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ರನ್ನು ಚುನಾವಣೆಗೆ ಪ್ರಚಾರಕರನ್ನಾಗಿ ಬಳಸಿಕೊಳ್ಳಲಾಗಿದೆ.

ಕಾಂಗ್ರೆಸ್‌ ಗ್ಯಾರೆಂಟಿಗಳು
ಗ್ಯಾರಂಟಿ 1 – ಪ್ರತಿ ತಿಂಗಳು ಅತ್ತೆಗೆ 4,000 ರೂ., ಸೊಸೆಗೆ 2,500 ರೂ.
ಗ್ಯಾರಂಟಿ 2 – ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ)
ಗ್ಯಾರಂಟಿ 3 – ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ
ಗ್ಯಾರಂಟಿ 4 – 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್
ಗ್ಯಾರಂಟಿ 5 – ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು
ಗ್ಯಾರಂಟಿ 6 – ಬಡವರಿಗೆ 200 ಯೂನಿಟ್‍ವರೆಗೂ ಉಚಿತ ವಿದ್ಯುತ್

andolanait

Recent Posts

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

34 seconds ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

6 mins ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

5 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

5 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

5 hours ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

5 hours ago